ಬೆಳಗಾವಿ : ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದು ಪರಾರಿ!
ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಮಯದಲ್ಲಿದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದ ರೂಪಕ ಮೆರವಣಿಗೆಯ ವೇಳೆ ಜನರ ಮಧ್ಯೆ ನುಗ್ಗಿದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು ಇರಿದು ಪರಾರಿಯಾಗಿದ್ದಾರೆ. ಈ ಘಟನೆ ವೇಳೆ ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಹಾಗೂ ನಜೀರ್ ಪಠಾಣ್ ಎಂಬ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮೂವರನ್ನು ಬಿಮ್ಸ್ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆ, ಹೊಟ್ಟೆ…
