ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಸುತ್ತಲೂ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಿದ ಅಬಕಾರಿ ಅಧಿಕಾರಿಗಳು

WhatsApp Group
Join Now
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ವಾಪ್ತಿಯಲ್ಲಿ ಅಕ್ರಮ ಮಾರಾಟ, ಸಾರಾಯಿ ಮಾರಾಟ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಅಬಕಾರಿ ಇಲಾಖೆಯಿಂದ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು ಪ್ರತಿವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕದ ಸುಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಿ ಜಾತ್ರೆ ಅದ್ದೂರಿಯಾಗಿ ನಡೆಸಲಾಗುತ್ತಿದೆ. ಯಲ್ಲಮ್ಮನ ಸನ್ನಿಧಾನದಲ್ಲಿ ಸುತ್ತ ಮುತ್ತಲು ಅಕ್ರಮವಾಗಿ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ಅಬಕಾರಿ ಸಿಪಿಐ ಶ್ರೀಶೈಲ ಅಕ್ಕಿ ತಿಳಿಸಿದ್ದಾರು. ಈ ಗಸ್ತು ಕಾರ್ಯದಲ್ಲಿ ರಾಮದುರ್ಗ ಅಬಕಾರಿ ಉಪ ಅದಿಕ್ಷಕರು ಆರ್.ಎಸ್. ಮುದಿಗೌಡರ, ಸವದತ್ತಿ ಅಬಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
