ಕರ್ನಾಟಕ ಲೋಕಾಯುಕ್ತ, ಧಾರವಾಡ ಜೂನ್ 12ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

WhatsApp Group Join Now

ಧಾರವಾಡ ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

About The Author