ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಚಿದಾನಂದ ದೊಡಮನಿ ಇವರ ಬಿಲ್ಡಿಂಗನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ, ಕಾರ್ಮಿಕ ಇಲಾಖೆ ರಾಮದುರ್ಗ ಮತ್ತು ಕರ್ನಾಟಕ ರಾಜ್ಯ ಇಂಧಿರಾಗಾಂಧಿ ಕಟ್ಟಡ ಕಾರ್ಮಿಕರ ಸಂಘ ರಾಮದುರ್ಗ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆ ಕಾರ್ಯಕ್ರಮವನ್ನು ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಕಾರ್ಯನಿರತ ಕಾರ್ಯದರ್ಶಿ ತಾಲೂಕು ಕಾನೂನು ಸೇವಾ ಸಮಿತಿ ಡಿ ಎಮ್ ನಧಾಫ್ ಅವರು ಅವರು ಸಸಿಗೆ ನೀರು ಉಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಯಾರಿಗಾದರೂ ಕಂಡು ಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಿ ದೂರನ್ನು ಸಲ್ಲಿಸಬೇಕೆಂದು ತಿಳಿಸಿದರು.
ಈ ಒಂದು ಸಭೆಯಲ್ಲಿ ಆರ್ ಸಿ ಹಲ್ಯಾಳ ಅಧ್ಯಕ್ಷರು ನ್ಯಾಯವಾದಿಗಳ ಸಂಘ ರಾಮದುರ್ಗ, ಎಂ ಆರ್ ನದಾಫ್ , ಬಿ ಇ ಓ ಆರ್ ಟಿ ಬಳಗೇರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಕರ್ ಕುಂಬಾರ್, ಕಾರ್ಮಿಕ ನಿರೀಕ್ಷಕರಾದ ರಾಜಶೇಖರ್ ಕುರಡಿಗೇರಿ, ಜ್ಯೋತಿ ಎಂ ಕಾಂತೆ ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಬೆಳಗಾವಿ, ಗಣೇಶ ವಾಯ್ ದೊಡಮನಿ ಅಧ್ಯಕ್ಷರು ಕರ್ನಾಟಕ ರಾಜ್ಯ ಇಂದಿರಾಗಾಂಧಿ ಕಟ್ಟಡ ಕಾರ್ಮಿಕರ ಸಂಘ ರಾಮದುರ್ಗ, ಹಾಗೂ ಎಸ್ ಎಸ್ ಜವಳಿ ನ್ಯಾಯವಾದಿಗಳು ರಾಮದುರ್ಗ, ಉಪಸ್ಥಿತರಿದ್ದರು

About The Author