
WhatsApp Group
Join Now
ಬೆಳಗಾವಿ ಜಿಲ್ಲೆ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆ, ಪಿಎಂ ವಿಶ್ವಕರ್ಮ ಹಾಗೂ ಪಿಎಂ ಸ್ವ – ನಿಧಿ ವಿಷಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜರುಗಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಭೀಮಶಂಕರ್ ಗುಳೇದ ಹಾಗೂ ಇತರೆ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಹೆಚ್ಚಿನ ಪ್ರಗತಿ ಸಾಧಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮ್ಮದ ರೋಶನ್. ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಅಂಗವಾಗಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಸ್ವಗೃಹಕ್ಕೆ ತೆರಳಿ ಸನ್ಮಾನಿಸಲಾಯಿತು.


