
WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು. ಪ್ರಾಚಾರ್ಯ ಎಸ್.ಎಸ್. ಬೂದೇಶ್ವರ ಮಾತನಾಡಿ, ಸೋದರತ್ವದ ಬಾಂಧವ್ಯ ಬೆಳೆಸುವ ಈ ಪವಿತ್ರ ಹಬ್ಬವನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸುವ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಸೋದರತ್ವದ ಭಾವನೆಗಳನ್ನು ಬೆಳೆಸುವದರ ಜೊತೆಗೆ ನಮ್ಮ ಹಬ್ಬಗಳ ಪಾವಿತ್ರಯತೆಯನ್ನು ತಿಳಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


