
WhatsApp Group
Join Now
ಕರ್ನಾಟಕ, ಆಂಧ್ರಪ್ರದೇಶದ ಮಂತ್ರಾಲಯ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 31 ದಿನದಲ್ಲಿ 3.38 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಕರ್ನಾಟಕ, ಆಂಧ್ರಪ್ರದೇಶದ ಶಕ್ತಿ ಯೋಜನೆ ಪ್ರಭಾವದಿಂದ ಮಂತ್ರಾಲಯದ ರಾಯರ ಮಠಕ್ಕೆ ಹೆಚ್ಚಿನ ಕಾಣಿಕೆ ಹರಿದುಬಂದಿದೆ. ದಸರಾ ರಜೆ, ಹಬ್ಬದ ಹಿನ್ನೆಲೆ ಮಂತ್ರಾಲಯ ಮಠಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಒಟ್ಟು ಕಾಣಿಕೆಯಲ್ಲಿ 3.30 ಕೋಟಿ ರೂ. ನೋಟುಗಳು, 7.44 ಲಕ್ಷ ರೂ ನಾಣ್ಯಗಳು, 136 ಗ್ರಾಂ ಚಿನ್ನ, 1180 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಮಠದ ನೂರಾರು ಸಿಬ್ಬಂದಿ, ಕರಸೇವಕರು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು ಎಂದು ರಾಯರ ಮಠದ ಆಡಳಿತ ಮಂಡಳಿ ತಿಳಿಸಿದೆ.


