12 August 2026
Advertisement
ರಾಜ್ಯ

ಬೆಳಗಾವಿಯಲ್ಲಿ ಮಾಜಿ ಶಾಸಕ ಪುತ್ರನ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

WhatsApp Group Join Now

ಬೆಳಗಾವಿ – ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಅನೀಸ್ ಸೈಯದ್, ಪತ್ನಿ ಅಯಿಮನ್ ಅನಿಸ್ ಸೈಯದ್, ಮಗ ಅಯಿಮನ್ ಮೃತ ದುರ್ದೈವಿಗಳು. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.

ಕೀಯಾ ಕಾರು ಚಲಾಯಿಸುತ್ತಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸುಭಾಷ್ ಪಾಟೀಲ್ ಗಂಭೀರ ಗಾಯವಾಗಿದೆ. ಇನ್ನು ಸುಭಾಷ್​ ಪಾಟೀಲ್​ ಪುತ್ರನಿಗೂ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

About The Author