ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ

WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಕಾರ್ಯಕ್ರಮ ಜರಗಿತು.
ಈ ವೇಳೆ ಎಎಸ್ಐ ರವಿ ಎಂ ಯರಗಟ್ಟಿ ಮಾತನಾಡಿ ಹಿಂದೂ–ಮುಸ್ಲಿಮ್ ಸೌಹಾರ್ದಕ್ಕೆ ಹೆಸರಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕು.
ಪ್ರತಿವರ್ಷದಂತೆ ಈ ವರ್ಷವೂ ಸಹ ಮೊಹರಂ ಹಬ್ಬವನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಶಾಂತರೀತಿಯಲ್ಲಿ ಮೊಹರಂ ಆಚರಣೆ ಮಾಡುವಂತೆ ಜನತೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹಿಂದೂ–ಮುಸ್ಲಿಮ್ ಸಮಾಜದ ಮುಖಂಡರು ಇದ್ದರು.
