ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜಾಮಿಯಾ ಮಸ್ಜಿದ್ ಎದುರಿಗೆ ಜುಮ್ಮಾ ನಮಾಜ್ ನಂತರ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಜಾಮಿಯಾ ಮಸ್ಜಿದ್ ಮೌಲಾನಾ ಜಹುರ್ ಹಾಜಿ,ವಕ್ಸ್ ಕಾಯಿದೆ 1995 ರ ಇತ್ತಿಚೆಗೆ ಅಂಗಿಕರಿಸಲಾದ ತಿದ್ದುಪಡಿಗಳನ್ನು ಹಿಂಪಡೆಯಲು ಒಂದು ಮನವಿ ಪತ್ರವನ್ನು ಸಲ್ಲಿಸಿಲಾಗಿತ್ತು, ಇತ್ತೀಚೆಗೆ 1995ರ ಕಾಯ್ದೆಗೆ ಅಂಗೀಕರಿಸಲಾದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು ಭಾರತದ ಸಂವಿಧಾನದಲ್ಲಿ ಖಾತರಿ ಪಡಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ.
ಈ ತಿದ್ದುಪಡಿಗಳು ಸಂವಿಧಾನದ 14, 25 26 ಮತ್ತು 29ನೆಯ ವಿಧಿಯಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಆದ್ದರಿಂದ ನಾವೆಲ್ಲಾ ಜನತೆ ಸೇರಿ ಲೋಕಸಭೆ ಮತ್ತು ರಾಜ್ಯಸಭೆ ಅಂಗೀಕರಿಸಿದ ಈ ಎಲ್ಲಾ ವಿವಾದಾತ್ಮಕ ತಿದ್ದುಪಡಿಗಳನ್ನು,
ರದ್ದುಗೊಳಿಸುವಂತೆ ಗೌರವದೊಂದಿಗೆ ರಾಷ್ಟ್ರಪತಿಯವರಲ್ಲಿ ವಿನಂತಿಸಿದರು.
ಈ ಸಂಧರ್ದಲ್ಲಿ ಮುಸ್ಲಿಂ ಮುಖಂಡರು, ಯುವಕರು ಇನ್ನಿತರರು ಉಪಸ್ಥಿತರಿದ್ದರು.



