WhatsApp Group
Join Now
ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವ ಮತ್ತು ಜಾತ್ರಾ ಮಹೋತ್ಸವ ಇದೇ ತಿಂಗಳು 27ರಿಂದ 28ರ ವರೆಗೆ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಶ್ರೀ ಶ್ರೀ ಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಉಡಿ ತುಂಬುವ ಕಾರ್ಯಕ್ರಮ ಮಹಾ ಕುಂಭಾಭಿಷೇಕ ರುದ್ರಾಭಿಷೇಕ ಗುಗ್ಗುಳು ಮತ್ತು ಸಾಮೂಹಿಕ ವಿವಾಹಗಳು ಮಹಾರಾತ್ಯೋತ್ಸವ ನೆರವೇರಲಿವೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿದ ಶ್ರೀ ನಾಗರಾಜ್ ಬಿ ದಳವಾಯಿ ಕಾರ್ಯಕ್ರಮದ ಕುರಿತು ಸಮಗ್ರವಾಗಿ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಉಮೇಶ್ ಏಣಿ ವಹಿದ್ ಕಾಜಿ ಮಲ್ಲಯ್ಯ ಹೊಸಮಠ್ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು



