ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾಡಳಿತದ ವತಿಯಿಂದ, ಕೆ.ಎಲ್.ಐ. ಸಂಸ್ಥೆಯ ಎಸ್.ಕೆ. ಪ್ರೌಢ ಶಾಲಾ ಮೈದಾನದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ವಿಶ್ವಾಸ ವೈದ್ಯ ಅವರು ನೆರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ.
ಈ ವೇಳೆ ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡದ ಪರಂಪರೆ ಮತ್ತು ಏಕೀಕರಣವನ್ನು ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ನಾಡಗೀತೆ, ಜಾನಪದ ನೃತ್ಯ ಎಲ್ಲರ ಮನಸೂರೆಗೊಂಡವು. ಈ ಮೂಲಕ ಕನ್ನಡದ ಗೌರವ ಮತ್ತು ಏಕತೆಯ ಸಂದೇಶವನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಸಾರಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ತಾಲೂಕಿನ ಪ್ರಮುಖ ಸಾಧಕರಿಗೆ ಮತ್ತು ಕನ್ನಡಪರ ಹೋರಾಟಗಾರರಿಗೆ ಈ ವೇದಿಕೆಯ ಮೇಲೆ ರಾಜ್ಯೋತ್ಸವದ ಗೌರವ ಸನ್ಮಾನ ಮಾಡಲಾಯಿತು.
ಈ ವೇಳೆ ತಾಲೂಕಆಡಳಿತ ಅಧಿಕಾರಿಗಳು, ಸ್ಥಳೀಯ ಮುಖಂಡರು, ಪುರಸಭೆ ಅಧ್ಯಕ್ಷರು, ಸದಸ್ಯರು, ಎಪಿಎಂಸಿ ಅಧ್ಯಕ್ಷರು,ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



