ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ ವದಂತಿ – ಎಚ್ಚೆತ್ತ ಆರೋಗ್ಯ ಇಲಾಖೆ, ಮೊಟ್ಟೆ ಟೆಸ್ಟ್‌ಗೆ ಸೂಚನೆ!

WhatsApp Group Join Now

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಎಂಬ ವದಂತಿ ಹಿನ್ನೆಲೆ ಜನರ ಆತಂಕ ದೂರು ಮಾಡೋಕೆ ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಬ್ರ್ಯಾಂಡ್‌ಗಳ ಮೊಟ್ಟೆ ಟೆಸ್ಟ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಜೊತೆಗೆ ಕಳೆದ 6 ತಿಂಗಳ ಹಿಂದೆ ಆಹಾರ ಸುರಕ್ಷತಾ ಇಲಾಖೆ ಟೆಸ್ಟ್‌ನಲ್ಲಿ ಮೊಟ್ಟೆ ಸೇಫ್ ಅಂತ ಕೂಡ ವರದಿ ಬಂದಿದೆ.

ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗ್ತಿರೋ ವಿಚಾರ ಅಂದರೆ ಅದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಅನ್ನೋ ವಿಚಾರ. ಜನ ಆತಂಕಕ್ಕೆ ಒಳಗಾಗಿದ್ದು ಮೊಟ್ಟೆ ತಿನ್ನೋದಕ್ಕೂ ಭಯ ಪಡುವಂತಾಗಿದೆ. ಜನರ ಆತಂಕ ದೂರು ಮಾಡೋದಕ್ಕೆ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಮೊಟ್ಟೆ ಟೆಸ್ಟ್ ಮಾಡೋದಕ್ಕೆ ಸೂಚನೆ ಕೊಟ್ಟಿದ್ದಾರೆ.

ಇನ್ನೂ ಪ್ರಮುಖವಾಗಿ ವಾಗಿ ಕ್ಯಾನ್ಸರ್‌ಗೆ ಕಾರಣ ಆಗುವ ಅಂಶಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಆಥರ ತಪ್ಪು ಆಗಿದ್ರೆ ಶಿಕ್ಷೆ ಆಗುತ್ತೆ. ಜನರು ಗೊಂದಲಕ್ಕೆ ಒಳಗಾಗೋದು ಬೇಡ. ಜನರು ಆತಂಕ ಕೂಡ ಪಡೋದು ಬೇಡ ಅಂತಿದ್ದಾರೆ.

ಕಳೆದ 6 ತಿಂಗಳ ಹಿಂದೆ ಮೊಟ್ಟೆ ಟೆಸ್ಟ್ ಆಗಿದ್ದು ಅದರಲ್ಲಿ ಮೊಟ್ಟೆಯಲ್ಲಿ ಯಾವುದೇ ಹಾನಿಕಾರಕ ಇಲ್ಲ ಅಂತಾ ವರದಿ ಬಂದಿದೆ. ಮೊಟ್ಟೆ ಸೇಫ್ ಅಂತಾ ಆಹಾರ ಸುರಕ್ಷತೆ ಮತ್ತು ಔಷಧಿ ಗುಣಮಟ್ಟ ನಿಯಂತ್ರಣ ‌ಇಲಾಖೆ ಕಮೀಷನರ್ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಮೊಟ್ಟೆ ಸೇಫ್ ಅಂತಾ ವರದಿ ಇದೆ ಅಂತಾ ಆಹಾರ ಸುರಕ್ಷತಾ ಇಲಾಖೆ ಹೇಳ್ತಿದೆ. ಇತ್ತ ಆರೋಗ್ಯ ಸಚಿವರು ಮೊಟ್ಟೆ ಟೆಸ್ಟ್ ಗೆ ಸೂಚನೆ ನೀಡಿದ್ದಾರೆ. ಆತಂಕದಲ್ಲಿ ಇರುವ ಜನರಿಗೆ ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಇಲಾಖೆಯ ಲ್ಯಾಬ್ ರಿಪೋರ್ಟ್ ಏನಾಗಿರಲಿದೆ ಎಂಬುದನ್ನ ಕಾದು ನೋಡಬೇಕಿದೆ.

About The Author