WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ರಾಮದುರ್ಗ ತಾಲೂಕ ಆಡಳಿತದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ವೇಳೆ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪುಗೊಳ್, ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ್ ಐನಾಪುರ್ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರನಾಥ ಕಾಂಬಳೆ, ಸಿಪಿಐ ವಿನಾಯಕ ಬಡಿಗೇರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹನುಮಂತ ವಕ್ಕುಂದ, ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ದಲಿತ ಸಮುದಾಯದ ಮುಖಂಡರುಗಳು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ. ಡಾ. ಎಬಿ ವಗ್ಗರ್ ಗುರುಗಳು ಉಪನ್ಯಾಸ ನೀಡಿದರು.
ಮೇತ್ರಿ ಸರ್ ಕಾರ್ಯಕ್ರಮ ನಿರೂಪಿಸಿದರು.



