ಸವದತ್ತಿ ನ್ಯಾಯಾಧೀಶರ ಬಿಳ್ಕೊಡುಗೆ ಸಮಾರಂಭ

WhatsApp Group Join Now

ಸವದತ್ತಿಯ ಪ್ರಧಾನ ಸಿವಿಲ್‍ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ. ಸಿದ್ರಾಮ ರೆಡ್ಡಿ ರವರು, 1ನೇ ಹೆಚ್ಚುವರಿ ಸಿವಿಲ್‍ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಿಂಗಸಗೂರು ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ವಕೀಲರ ಸಂಘ ಹಾಗೂ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಪರವಾಗಿ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎಸ್.ಎಸ್.ಅಂಗಡಿ, ಮಂಜುನಾಥ ಸನ್ನಿಂಗನವರ ಮತ್ತು ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್. ಎಸ್. ಹುಬ್ಬಳ್ಳಿ, ಕಾರ್ಯದರ್ಶಿ ಎಸ್.ಎಸ್.ಕಾಳಪ್ಪನವರ ಹಾಗೂ ನ್ಯಾಯವಾದಿಗಳ ಸಂಘದ ಹಿರಿಯ ಕಿರಿಯ ಸದಸ್ಯರು ಇತರರು ಉಪಸ್ಥಿತರಿದ್ದರು.

About The Author