ಸವದತ್ತಿ ನ್ಯಾಯಾಧೀಶರ ಬಿಳ್ಕೊಡುಗೆ ಸಮಾರಂಭ

WhatsApp Group Join Now

ಸವದತ್ತಿಯ 2ನೇ ಹೆಚ್ಚುವರಿ ಸಿವಿಲ್‍ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ರವರು, ಸಿವಿಲ್‍ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಯರಗಟ್ಟಿ ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ಸವದತ್ತಿ ನ್ಯಾಯವಾದಿಗಳ ಸಂಘದಿಂದ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೇವದಾಸ ಎಚ್. 1ನೇ ಹೆಚ್ಚುವರಿ ನ್ಯಾಯಾಧೀಶರಾದ ಅರ್ಪಿತಾ ಬಿ. ಬೆಲ್ಲದ ಮತ್ತು ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್. ಎಸ್. ಹುಬ್ಬಳ್ಳಿ, ಕಾರ್ಯದರ್ಶಿ ಎಸ್.ಎಸ್.ಕಾಳಪ್ಪನವರ ಮಹಿಳಾ ಪ್ರತಿನಿಧಿ ಎಸ್.ವಾಯ್.ಶಿಬಾರಗಟ್ಟಿ ಹಾಗೂ ನ್ಯಾಯವಾದಿಗಳ ಸಂಘದ ಹಿರಿಯ ಕಿರಿಯ ಸದಸ್ಯರು ಇತರರು ಉಪಸ್ಥಿತರಿದ್ದರು.

About The Author