ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 19-09-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ಈ ವರ್ಷದ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.
ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 7345 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 594 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 220 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೇ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ, ಪಕ್ಷಗಾರರ ನ್ಯಾಯಾಲಯದ ದೀರ್ಘಾವಧಿಯ ಪ್ರಕ್ರಿಯೆ ಮತ್ತು ವೆಚ್ಚವನ್ನು ತಪ್ಪಿಸಬಹುದು. ಇದು ನ್ಯಾಯಾಲಯದ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಪಕ್ಷಗಾರರಿಗೆ ತ್ವರಿತ ಮತ್ತು ಸುಲಭವಾದ ಪರಿಹಾರವನ್ನು ಒದಗಿಸುತ್ತದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ, ರವರು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ದೇವದಾಸ್ ಎಚ್, ರವರು ಮಾತನಾಡಿ ಈ ಬಾರಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಪ್ಟೆಂಬರ್ 19, 2026 ಕ್ಕೆ ಮುಂದುಡಿ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು. ಸವದತ್ತಿ ನ್ಯಾಯಾಲಯಗಳಲ್ಲಿ ಸಾರ್ವಜನಿಕರು ತಮ್ಮ ವರ್ಷಗಟ್ಟಲೆ ಬಾಕಿ ಉಳಿದಿದ್ದ ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯಗಳನ್ನು ಸುಲಭವಾಗಿ ಬಗೆಹರಿಸಿಕೊಂಡರು ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಅರ್ಪಿತಾ ಬಿ ಬೆಲ್ಲದ, ರವರು ಮಾತನಾಡಿ ಈ ಬಾರಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳವುದರಿಂದ ಉಭಯ ಪಕ್ಷಗಾರರ ಬಾಂಧವ್ಯವು ಉಳಿಯುತ್ತದೆ. ಕಡಿಮೆ ಕರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ಒಳ್ಳೆಯ ಅವಕಾಶವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಲೋಕ್ ಅದಾಲತನಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ ಉಪಾಧ್ಯಕ್ಷರಾದ ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಗಳಾದ ಎಸ್.ಎಸ್.ಕಾಳಪ್ಪನವರ, ಆರ್.ವಿ.ಹುಂಬಿ ಮಹಿಳಾ ಪ್ರತಿನಿಧಿ ಎಸ್.ವಾಯ್.ಶಿಬಾರಗಟ್ಟಿ ವಕೀಲ ಸಂಧಾನಕಾರರಾದ ಎಚ್.ಎಮ್.ನಾಗನೂರ, ವಿ.ಎಸ್.ಮುನವಳ್ಳಿ, ವಿ.ವಿ.ಪಾಟೀಲ, ಹಾಗೂ ನ್ಯಾಯವಾದಿಗಳಾದ ಎಲ್.ಟಿ.ಹೊಸಮನಿ, ಎಮ್.ಬಿ.ದ್ಯಾಮನಗೌಡರ, ಎಮ್.ಎಮ್.ಯಲಿಗಾರ, ಬಿ.ಕೆ.ಕಡಕೋಳ, ಎಮ್.ಎಫ್.ಬಾಡಿಗೇರ, ವಾಯ್.ಪಿ.ರಾಮಾಜಾರ, ಎಮ್.ಎನ್.ಮುತ್ತಿನ, ಸಿ.ವಿ.ಸಾಂಭಯ್ಯನಮಠ, ಎಸ್.ಎಸ್.ಹಿರೇಮಠ, ಜೆ.ಎಮ್.ತಾಂಬೋಳಿ, ವಾಯ್.ಎಲ್.ಕಿಟದಾಳ, ಸಿ.ಎಸ್.ಮುತ್ತಗಿ, ಯು.ಆಯ್.ನವಲನ್ನವರ, ಎ.ಎ.ಪಠಾಣ, ಎ.ಬಿ.ಬಾವಾಖಾನ, ಎಮ್.ಎಮ್.ದೊಡಮನಿ, ಎ.ಎನ್.ಪವಾಡಿಶೆಟ್ಟರ, ಮುಂತಾದವರು ಉಪಸ್ಥಿತರಿದ್ದರು.



