BREAKING NEWS

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು. ರೈತ ಮಹಿಳೆಯರ ಮತ್ತು ರೈತ ಕುಟುಂಬಗಳ ಆರ್ಥಿಕ ಶಕ್ತಿ-ಚೈತನ್ಯವನ್ನು ಗ್ಯಾರಂಟಿ ಯೋಜನೆಗಳು ಹೆಚ್ಚಿಸಿರುವುದನ್ನು ವಿವರಿಸಿದ ಬಡಗಲಾಪುರ…

Read More

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು.ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.ಅಂದು ತಾವು ಶಿಕ್ಷಕರಾಗಿ ಬಂದ ವೇಳೆಗೆ ತಮ್ಮ ಜೊತೆಗೆ ಈಗ ವೇದಿಕೆ ಹಂಚಿಕೊಂಡ ಶಿಕ್ಷಕರಾಗಿದ್ದವರು ಹಾಗಾಗಿ ಅವರನ್ನು…

Read More

ಸರ್ಕಾರ ಇಡು ಗಂಟು ಸಾವಿರ ಕೋಟಿ ಸಾಹಿತ್ಯ ಪರಿಷತ್ತಿಗೆ ಕೊಡಲು ಮನವಿ

ಕನ್ನಡ ಸಾಹಿತ್ಯ ಪರಿಷತ್ತಿಗೆ ಕರ್ನಾಟಕ ರಾಜ್ಯ ಸರ್ಕಾರ ಇಡು ಗಂಟು ಎಂದು ಒಂದು ಸಾವಿರ ಕೋಟಿ ರೂಪಾಯಿ ನೀಡಿ ಆರ್ಥಿಕವಾಗಿ ಭದ್ರ ಸ್ವಾವಲಂಭಿ ಪರಿಷತ್ತು ಸ್ವಾಭಿಮಾನಿಯಾಗುವಂತೆ ಮಾಡಬೇಕೆಂದು ಸಾಹಿತಿ ಜೆ ಎಮ್ ರಾಜಶೇಖರ ಮನವಿಸಿಕೊಂಡು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಂತರ ಸರ್ಕಾರದ ಆರ್ಥಿಕ ಸೌಲಭ್ಯವನ್ನು ಪ್ರತಿ ವರ್ಷ ಕೊಡುವುದನ್ನು ಸ್ಥಗಿತ ಮಾಡಬಹುದು. ಇಡು ಗಂಟು ಒಂದು ಸಾವಿರ ಕೋಟಿ ರೂಪಾಯಿ ರಾಷ್ಟ್ರೀಯ ಬ್ಯಾಂಕಿನಲ್ಲಿರಿಸಿ ಬರುವ ಬಡ್ಡಿಯಿಂದ ಪರಿಷತ್ತಿನ ಆಡಳಿತ ಮತ್ತು ಸಾಹಿತ್ಯಕ ಕಾರ್ಯಕ್ರಮಗಳನ್ನು ಮಾಡಲು ಮುಕ್ತ…

Read More

ಕೋಲಾರ ಜಿಲ್ಲೆಯ ಶಾಸಕರಿಗೆ ಉಸ್ತುವಾರಿ ನೀಡಿ.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡಗಳೊಂದಿಗೆ 2024 ಹಾಗೂ 2025 ಸಾಲಿನ ಆಯಾ ವ್ಯಯ ಪೂರ್ವಭಾವಿ ಬಜೆಟ್ ಚರ್ಚೆ.. ಮುಖ್ಯಮಂತ್ರಿ ಸಿದ್ದರಾಮಯ್ಯ…. ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೈತ ಸಂಘಗಳ ಮುಖಂಡಗಳೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 2024 ಆಗ 2025ರ ರಾಜ್ಯ ಬಜೆಟ್ ಪೂರ್ವಭಾವಿ ತಯಾರಿ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದರು ಸಭೆಯಲ್ಲಿ ಹಲವಾರು ವಿಚಾರಗಳು ರೈತರ ಬಗ್ಗೆ ಚರ್ಚೆ ಆಯಿತು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ವಿಚಾರವಾಗಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ…

Read More

ವಕೀಲನ ಮಗನ ಬರ್ಬರ ಹತ್ಯೆ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ(11/02/2024)ರೌಡಿ ಶೀಟರ್ ನ ಬರ್ಬರ ಹತ್ಯೆ ಮಾಡಿದ್ದು ಜನ ಭಯಬೀತರಾಗಿದ್ದಾರೆ.ಪಾಲಹಳ್ಳಿ ಗ್ರಮದ ವಕೀಲ ನಾಗೇಂದ್ರ ಎಂಬುವರ ಮಗ ಪ್ರಜ್ವಲ್(29) ಅಲಿಯಾಸ್ ಪಾಪು ಕೊಲೆಯಾಗಿದ್ದು, ಪಾಲಹಳ್ಳಿ ಗ್ರಾಮದಲ್ಲಿ ಬೇಕರಿ ಒಂದರ ಮುಂದೆ ಇಂದು ಬೆಳಿಗ್ಗೆ ನಿಂತಿರುವಾಗ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾ ಏಕಿ ಕಾರಿನಿಂದ ಇಳಿದು ಮಚ್ಚುಗಳಿಂದ ಪಾಪುವಿನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ ಇವರಿಂದ ತಪ್ಪಿಸಿಕೊಳ್ಳಲು ಪ್ರತಯ್ನಿಸಿದಾದರು…

Read More

ಸಚಿವರ ಬಗ್ಗೆ ಅವಹೇಳಕಾರಿಮಾತು ಆಡಿದ್ದವನ ಸೆರೆ

ಬೆಂಗಳೂರು: ಸಾರಿಗೆ ಸಚಿವರಾಮಲಿಂಗಾರೆಡ್ಡಿ ಬಗ್ಗೆಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ (50) ಬಂಧಿತ.ದೊಡ್ಡಬಳ್ಳಾಪುರದ ಮುನೇಗೌಡ,ತನ್ನ ಚಾಲನಾ ಪರವಾನಗಿ (ಡಿ.ಎಲ್)ನವೀಕರಣಕ್ಕಾಗಿ ಆರ್‌ಟಿಒಗೆಅರ್ಜಿಸಲ್ಲಿಸಿದ್ದ. ಹಲವು ದಿನವಾದರೂಡಿ.ಎಲ್ ಕೈಗೆ ಸಿಕ್ಕಿರಲಿಲ್ಲ. ಡಿ.ಎಲ್ನೀಡುವಂತೆ ಹಲವು ಬಾರಿ ಆರ್‌ಟಿಒಕಚೇರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರೂಸ್ಪಂದನೆ ಸಿಕ್ಕಿರಲಿಲ್ಲ. ಇದರಿಂದ ನೊಂದಮುನೇಗೌಡ, ಫೆ. 8ರಂದು ವಿಧಾನಸೌಧಎದುರು ಆಯೋಜಿಸಿದ್ದ ಜನಸ್ಪಂದನಾಕಾರ್ಯಕ್ರಮದಲ್ಲಿಅಹವಾಲು ಸಲ್ಲಿಸಲು ಬಂದಿದ್ದ. ಅಧಿಕಾರಿಗಳು ಸೂಕ್ತ ರೀತಿ ಅಹವಾಲು ಆಲಿಸಿರಲಿಲ್ಲ.ಮತ್ತಷ್ಟು ಸಿಟ್ಟಾದ ಮುನೇಗೌಡ,ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಗ್ಗೆ ಅವಹೇಳನಕಾರಿಯಾಗಿಮಾತನಾಡಿದ್ದ ಎಂದು ಸಾರಿಗೆ ಇಲಾಖೆ ಅಧಿಕಾರಿಗಳುಪೊಲೀಸರಿಗೆ ದೂರು ನೀಡಿದ್ದರು.

Read More

ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಚಿವ ಸೋಮಣ್ಣಗೆ ಕೈತಪ್ಪಿದ ಟಿಕೆಟ್​

ನವದೆಹಲಿ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections)ಇದೀಗ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದು, ಮಾಜಿ ಸಚಿವ ಸೋಮಣ್ಣಗೆ ರಾಜ್ಯಸಭೆ ಟಿಕೆಟ್​ ಕೈತಪ್ಪಿದೆ. ವಿ.ಸೋಮಣ್ಣ ಅವರು ಟಿಕೆಟ್​ ಆಕಾಂಕ್ಷಿಯಾಗಿದ್ದರು. ಅವರ ಬದಲು ನಾರಾಯಣ ಭಾಂಡಗೆಗೆ ಟಿಕೆಟ್​​ ನೀಡಲಾಗಿದೆ. ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಅಭ್ಯರ್ಥಿಗಳ…

Read More

ಹಾಲಿನ ಟ್ರಕ್‌ ಹಲವು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಮೂವರು ಸಾವು, 20 ಮಂದಿಗೆ ಗಾಯ

ಸಿಕ್ಕಿಂನಲ್ಲಿ ಹಲವು ಕಾರುಗಳಿಗೆ ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿ ಡಿಕ್ಕಿ ಹೊಡೆದ  ಪರಿಣಾಮ ಮೂವರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಈ ಘಟನೆ ನಡೆದಿದೆ.ಸಿಕ್ಕಿಂನ ರಾಣಿಪೂಲ್‌ ನಲ್ಲಿ ಶನಿವಾರ ನಡೆದ ಜಾತ್ರೆಯಲ್ಲಿ ನಿಂತಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಆ ಪ್ರದೇಶದಲ್ಲಿ ನೆರೆದಿದ್ದ ಅನೇಕರು ನಜ್ಜುಗುಜ್ಜಾದರು.ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿರೋದೇ ಅಪಘಾತಕ್ಕೆ ಕಾರಣ…

Read More

ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ warrant ಜಾರಿ.!

ಬೆಂಗಳೂರು (ಫೆ.10): ಬೆಂಗಳೂರು ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಆರೋಗ್ಯಾಧಿಕಾರಿಂದ ಹಾಗೂ ಪೊಲೀಸ್ ಅಧಿಕಾರಿಗಳಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಇನ್ನು ಈ ಬಗ್ಗೆ ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ…

Read More

ಬೆಸ್ಕಾಂ ಇಲಾಖೆಯಲ್ಲಿರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುತ್ತಿಲ್ಲ ಎಂದು ರೈತರಿಂದ ಪ್ರತಿಭಟನೆ.

ಗುಬ್ಬಿ: ತಾಲೂಕಿನ ನಿಟ್ಟೂರು ಬೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುವಲ್ಲಿ ಬೆಸ್ಕಾಂ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ ಎಂದು ರೈತರು ನಿಟ್ಟೂರು ಉಪಸ್ಥಾವರಘಟಕದ ಮುಂದೆ ದಿಡಿರ್ ಪ್ರತಿಭಟನೆ ನಡೆಸಿದರು. ರೈತರು ಮಾತನಾಡಿ ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಯಾವ ಬೆಳೆಯನ್ನು ಬೆಳೆಯಲು ಸಾಧ್ಯವಾಗಿಲ್ಲ. ಬೇಸಿಗೆ ಮುನ್ನವೇ ಅತಿ ಹೆಚ್ಚು ಬಿಸಿಲಿನ ಛಾಯೆ ವ್ಯಾಪಕವಾಗಿ ಹೆಚ್ಚಾಗಿದ್ದು ಇರುವ ತೆಂಗು ಅಡಿಕೆ ಬೆಳೆಯನ್ನು ಉಳಿಸಿಕೊಳ್ಳಲು ಹರ ಸಹಾಸ ಪಡುವಂತಹ ಸ್ಥಿತಿ ಬಂದಿದೆ. ಅದರಲ್ಲಿ ಬೆಸ್ಕಾಂ ಇಲಾಖೆಯು ಕೂಡ…

Read More