ಧಾರವಾಡದಲ್ಲಿ ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ ರಚನೆ; ಒಂದೂವರೆ ಟನ್ ತೂಕ; ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ ಅವರಿಂದ ಲೋಕಾರ್ಪಣೆ
ಭಾರತದ ಸಂವಿಧಾನ ರಚಿಸಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಸಂವಿಧಾನ ಪುಸ್ತಕ ರೀತಿಯಲ್ಲಿ ನಿರ್ಮಿಸಿ, ನಗರದ ಪ್ರಸಿದ್ದ ರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ ಸಚಿವ ಸಂತೋಷ ಲಾಡ್ ಅವರಿಂದ ಲೋಕಾರ್ಪಣೆ ಮಾಡಲಾಯಿತು. ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಲೋಹದಲ್ಲಿ ರಚಿತ ಪೀಠಿಕೆಯನ್ನು…
