ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ
ಕೊಪ್ಪಳ: ಇಲ್ಲಿನ ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಇವರ ಸಹಯೋಗದಲ್ಲಿ ಮೇ ೨೫ ಹಾಗು ೨೬ ರಂದು ನಡೆದ ೧೦ ನೇ ಮೇ ಸಾಹಿತ್ಯ ಮೇಳದಲ್ಲಿ ನಿರ್ಣಯಿಸಿದ ಬೇಡಿಕೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಮನವಿ ಸಲ್ಲಿಸಿದರು.ಮೇಳದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅವಶ್ಯವಾಗಿರುವ ನಿರ್ಣಯಗಳನ್ನು ಮಂಡಿಸಿದ್ದು, ಈ ನಿರ್ಣಯಗಳ ಶೀಘ್ರ ಅನುಷ್ಠಾನಗೊಳ್ಳುವುದು ಅವಶ್ಯವಾಗಿದ್ದು ಸರಕಾರ ಅವುಗಳ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಪ್ರಗತಿಪರ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಬರೆದ…
