BREAKING NEWS

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂ.ಕಳೆದುಕೊಂಡ ಫೈನಾನ್ಸ್ ಅನಾಲಿಸ್ಟ್!

ಬೆಂಗಳೂರು: ಮತ್ತೊಂದು ಆನ್‌ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.ಕೋಲ್ಕತ್ತಾ ಮೂಲದ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ವಾಸಿಸುವ ಪ್ರೀಮಿಯರ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಕೋಲ್ಕತ್ತಾ (IIMC)ಯಿಂದ ಸ್ನಾತಕೋತ್ತರ ಪದವೀಧರರಾಗಿರುವ ದೇಬಾಶಿಶ್ ಬಯೆನ್ ಭಾನುವಾರ ಎರಡು ವಹಿವಾಟುಗಳಲ್ಲಿ ತನ್ನ ಹಣವನ್ನು ಕಳೆದುಕೊಂಡಿದ್ದಾರೆ.  ಕೊತ್ತನೂರಿನ ಪ್ರತಿಷ್ಠಿತ ಮದ್ಯದ ಅಂಗಡಿಯ ವೆಬ್‌ಸೈಟ್‌ನಿಂದ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಪ್ರಯತ್ನಿಸಿ ಸಿಕ್ಕ ನಂಬರ್‌ಗೆ ಸಂಪರ್ಕಿಸಿದಾಗ ವಾಟ್ಸ್‌ಆ್ಯಪ್‌ನಲ್ಲಿ…

Read More

ಶಿವಮೊಗ್ಗ: ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಸಾಗಾಟ.!

ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2  ರವರ ಮಾರ್ಗದರ್ಶನದಲ್ಲಿ ಶ್ರೀ ಬಾಲರಾಜ್ ಬಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ…

Read More

ಗೃಹಜ್ಯೋತಿ ನಿಯಮದಲ್ಲಿ ಸರ್ಕಾರದಿಂದ ಮಹತ್ವದ ಬದಲಾವಣೆ ಶೇಕಡವಾರು  ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಬಿಗ್ ಆಫರ್ ನೀಡಿದೆ. ನಡೆದ ಸಚಿವ ಸಂಪುಟದಲ್ಲಿ ಶೇಕಡವಾರು 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ.ಸಚಿವ ಹೆಚ್‌.ಕೆ.ಪಾಟೀಲ್‌ ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ್ದಾರೆ. ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು  ಬದಲಾಗಿ 10 ಯುನಿಟ್…

Read More

ರಾಮ ಮಂದಿರ ಉದ್ಘಾಟನೆ ದಿನ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.

ಗೋಕಾಕ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪಣೆ ಐತಿಹಾಸಿಕ ಮಹತ್ವದ ಸಮಾರಂಭವಾಗಿದ್ದು ಅಂದು ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.   ಮಂಗಳವಾರದ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಸ್ವಚ್ಛತೀರ್ಥ ಅಭಿಯಾನ ಹಿನ್ನಲೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳಗಳಿಂದ ಹಮ್ಮಿಕೊಂಡ ನಗರದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ದೇಗುಲಗಳ ಸ್ವಚ್ಛತೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.   ಕಾರ್ಯಕರ್ತರು ಹಾಗೂ…

Read More

ಇತಿಹಾಸ ಸೃಷ್ಟಿಸಿದ ಭಾರತ VS ಅಫ್ಘಾನ್ T20 ಕ್ರಿಕೆಟ್ ಪಂದ್ಯ

ಬೆಂಗಳೂರು : ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯ ಇತಿಹಾಸ ಸೃಷ್ಟಿಸಿದೆ. ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್ ಮೂಲಕ ಕೊನೆಗೂ ಭಾರತ ಗೆದ್ದುಕೊಂಡಿದೆ. ಮೊದಲು ಬ್ಯಾಟ್ ಮಾಡಿದ್ದ ಭಾರತ ( 20 ) ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿತು. ಭಾರತದ ಪರ ನಾಯಕ ರೋಹಿತ್ ಶರ್ಮಾ ( 69 ) ಬಾಲ್ ಗೆ 121 ರನ್ ಕಲೆ ಹಾಕಿದರು. ಇದರಲ್ಲಿ  ಭರ್ಜರಿ…

Read More

ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ ಪಾವತಿ ಮಾಡದಿದ್ದರೆ, ಅಂತಹ ಜಾಹೀರಾತು ಸಂಸ್ಥೆಗಳಿಗೆ ಕಮಿಷನ್ ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳ ಸಮಸ್ಯೆಗಳ ಕುರಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಗುರುವಾರ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿ ಮಾತನಾಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ…

Read More

ಮಾಹಿತಿ ನೀಡದೆ ಇರುವುದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ : ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ

ಮಡಿಕೇರಿ ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರುಕೊಡಗು ಜಿಲ್ಲೆ ಮಡಿಕೇರಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರ ಅರ್ಜಿ ಸ್ವೀಕರಿಸಿ ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಮಾತನಾಡಿದರು ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು…

Read More

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಂಗಡಿ ಹಾಗೂ ಕಂಪನಿ ಹಾಗೂ ಇತರೆ ವಾಣಿಜ್ಯ ಮಳಿಗೆಗಳ ಮೇಲೆನಾಮಫಲಕದಲ್ಲಿ ಕನ್ನಡ ಬಳಕೆ ಮಾಡಬೇಕೆಂದು 20,977 ನೋಟಿಸ್‌ ಜಾರಿ ಮಾಡಿದೆ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬಿಬಿಎಂಪಿ 20,977 ನೋಟಿಸ್‌ ಜಾರಿ ಮಾಡಿದೆ.‘ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಸದಿದ್ದರೆ ಅಂತಹವರಿಗೆ ತಿಳಿವಳಿಕೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗೆಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಸಂಗೊಳ್ಳಿ ಹಿರೇಮಠದ…

Read More

ಫೋನ್ ಚಾರ್ಜ್​ ಮಾಡುವ ಅಗತ್ಯವೇ ಇಲ್ಲ: ಶೀಘ್ರದಲ್ಲೇ ಬರಲಿದೆ 50 ವರ್ಷ ತಾಳಿಕೆ ಬರುವ ಬ್ಯಾಟರಿ!!

ಬೀಜಿಂಗ್​: ಬ್ಯಾಟರಿ ಖಾಲಿಯಾಗಿ ಮೊಬೈಲ್​ಫೋನ್​ ಬಂದಾದರೆ ಜೀವವೇ ಹೋದಂತಾಗುತ್ತದೆ. ಆದರೆ, ಈಗ ಹೊಸ ಬ್ಯಾಟರಿಯೊಂದನ್ನು ಸಂಶೋಧನೆ ಮಾಡಲಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡುವ ಅಗತ್ಯವೇ ಇಲ್ಲ. ಇದು 50 ವರ್ಷಗಳವರೆಗೆ ಬಾಳಿಕೆ ಬರುತ್ತದೆ. ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳವರೆಗೆ ವಿದ್ಯುತ್ ಉತ್ಪಾದಿಸಬಹುದು ಎಂದು ಹೇಳಲಾಗುವ ಹೊಸ ಬ್ಯಾಟರಿಯನ್ನು ಚೀನಾದಲ್ಲಿ ಸ್ಟಾರ್ಟ್-ಅಪ್ ಕಂಪನಿಯೊಂದು ಅಭಿವೃದ್ಧಿಪಡಿಸಿದೆ. ದಿ ಇಂಡಿಪೆಂಡೆಂಟ್​ನಲ್ಲಿ ಈ ಕುರಿತು ವರದಿಯೊಂದು ಪ್ರಕಟವಾಗಿದೆ. ಈ ಕಂಪನಿಯು ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಮತ್ತು ಅಗತ್ಯವಿರುವ ಎಲ್ಲಾ ಅನುಮತಿಗಳನ್ನು…

Read More