BREAKING NEWS

ಮೇ 07 ರಂದು ಜರುಗಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸಧೃಡ ರಾಷ್ಟ್ರ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಅವರು ಕರೆ ನೀಡಿದರು.

ಚಿಕ್ಕೋಡಿ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಕುಂಬ ಮೇಳ ಜಾಥಾ ಕಾರ್ಯಕ್ರಮಕ್ಕೆ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಚಾಲನೆ ನೀಡಿ ಅವರು ಮಾತನಾಡಿದರು ಎಲ್ಲ ಮತದಾರರು ತಪ್ಪದೇ ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ. ಮತದಾನದಿಂದ ಯಾರು ಕೂಡಾ ಹೊರಗುಳಿಯದೇ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು. ಒಬ್ಬ ಮಹಿಳೆ ಕನಿಷ್ಠ ಹತ್ತು ಜನರಿಗಾದ್ರೂ ಮತದಾನ ಮಾಡುವಂತೆ ಪ್ರೇರೆಪಸಿಬೇಕು ಎಂದು ಕುಂಬ ಮೇಳದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ತಿಳಿಸಿದರು. ಕಡ್ಡಾಯವಾಗಿ ಮತದಾನ…

Read More

ವಿಶ್ವ ಹಿಂದೂ ಪರಿಷತದಿಂದ ರಾಮೋತ್ಸವ ಹಾಗೂ ಮತದಾನೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಗುರುವಾರ ಸಾಯಂಕಾಲ ಕಿಲಬನೂರ ಗ್ರಾಮದಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಸಲಾಯಿತು ಇದೇ ಸಂದರ್ಭದಲ್ಲಿ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಶ್ರೀ ಪ್ರಕಾಶ ಸೂಳಿಭಾವಿ ಅವರು ಮತದಾನೋತ್ಸವ ಬಗ್ಗೆ ಮಾತನಾಡಿ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಿದರು.ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಭಾವಿಕಟ್ಟಿ ಅವರು ಮರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ಉಪನ್ಯಾಸ ನೀಡಿದರು.ಸಂದರ್ಭದಲ್ಲಿ: ಪ್ರಭು ಬಾಳಿಕಾಯಿ, ಅಪ್ಪನ್ನಗೌಡ ಪಾಟೀಲ, ಗೌರಮ್ಮ ರಾವಳ, ಪ್ರೇಮಾ ಚವ್ವನ್ನವರ ಹಾಗೂ ಕಿಲಬನೂರ ಗ್ರಾಮದ…

Read More

ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸಮಾರಂಭದಲ್ಲಿ ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ವಹಿಸಿ ಅವರು ಮಾತನಾಡಿದರು. ಹಿಂದೆ ಬಂಡವಾಳ ಶಾಹಿಗಳ ವಿರುದ್ಧ ಯಾವ ರೀತಿ ಹೋರಾಟ ನಡೆದಿತ್ತು ಅದೇ ರೀತಿಯಲ್ಲಿ ಇನ್ನೊಂದು ಹೋರಾಟ ನಡೆಯಬೇಕಾಗಿದೆ. ಏಕೆಂದರೆ ಕಾರ್ಮಿಕರು ಗುಲಾಮರಲ್ಲ ಅವರು ಮಾಡುವ ಕೆಲಸಕ್ಕೆ ತಕ್ಕಂತೆ ವೇತನ ಸಿಗುತ್ತಿಲ್ಲ. ನಾವೆಲ್ಲರೂ ಚಿಕಾಗೋ ನಗರದಲ್ಲಿ ನಡೆಸಿದಂತಹ ಹೋರಾಟಕ್ಕೆ ಸಜ್ಜಾಗಬೇಕೆಂದು ಆಗ್ರಹಿಸಿದರು.ನಿಖಿಲ ಕುಲಕರ್ಣಿ…

Read More

ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಲೈಂಗಿಕವಾಗಿ ಮಹಿಳೆಯರನ್ನು ಬಳಸಿಕೊಂಡ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳು ಸಮ್ಮುಖದಲ್ಲಿ ರಾಮದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.ಪ್ರತಿಭಟನಾಕಾರನ್ನು ಉದ್ದೇಶಿಸಿ ಸಿಐಟಿಯು ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಮಾತನಾಡಿ, ಇತ್ತಿಚೇಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಕೊಲೆಗಳು ನಡೆಯುತ್ತಿರುವುದು ಮಾನವ ಸಮಾಜಕ್ಕೆ ನಾಚಿಕೆ ತರುವಂತಹದ್ದು. ಕಳೆದ ಕೆಲವು ದಿನಗಳಿಂದ ಹಾಸನದಲ್ಲಿ ಪೆನ್ ಡ್ರೆöÊವ್ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ…

Read More

ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆ

ದುರಹಂಕಾರಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.ರಾಮದುರ್ಗ ತಾಲೂಕಿನ ಸುರೇಬಾನ ಹಾಗೂ ಬಟಕುರ್ಕಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಪರ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಮತಯಾಚನೆ ಮಾಡಿದ ಅವರು, ಕಳೆದ ೧೦ ವರ್ಷಗಳಿಂದ ಉತ್ತಮ ಆಡಳಿತ ನಡೆಸಿದ ಮೋದಿ ಅವರನ್ನು ಕೆಳಗೆ ಇಳಿಸಲು…

Read More

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ

ಬೆಳಗಾವಿ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಿಕ್ಕೋಡಿ, ಬೆಳಗಾವಿ ಲೋಕಸಭಾ ಮತ ಕ್ಷೇತ್ರಗಳ ಚುನಾವಣೆ ಮೇ.07 ರಂದು ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನದ ಸಮಯ ನಿಗದಿ ಪಡಿಸಲಾಗಿದೆ. ಎಲ್ಲ ಮತದಾರರು ಕಡ್ಡಾಯವಾಗಿ…

Read More

01.05.2024 ರಂತೆ ಮುಂದಿನ 5 ದಿನಗಳವರೆಗೆ ದಿನವಾರು ಶಾಖದ ಅಲೆ ಎಚ್ಚರಿಕೆ.

ದಿನ 1 (01.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿಗಳು…

Read More

ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ಅಸ್ಟ್ರಾಜೆನೆಕಾ ಮೊದಲ ಬಾರಿಗೆ ನ್ಯಾಯಾಲಯದ ದಾಖಲೆಗಳಲ್ಲಿ ಕೋವಿಶೀಲ್ಡ್ ಮತ್ತು ವ್ಯಾಕ್ಸ್ಜೆವ್ರಿಯಾ ಎಂಬ ಬ್ರಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾಗುವ ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ತಯಾರಕರು ಹೇಳಿದಂತೆ, ಕೋವಿಶೀಲ್ಡ್, ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್ಲೆಟ್ ಎಣಿಕೆ ಕಡಿಮೆಯಾಗುವ ಸ್ಥಿತಿಯನ್ನು ಉಂಟುಮಾಡಬಹುದು – ರೋಗಲಕ್ಷಣಗಳು ಟಿಟಿಎಸ್ – ಥ್ರಾಂಬೋಸೈಟೋಪೆನಿಯಾ ಸಿಂಡ್ರೋಮ್ನೊಂದಿಗೆ ಥ್ರಾಂಬೋಸಿಸ್ – ಇದು ಜನರಿಗೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್ಲೆಟ್ ಎಣಿಕೆಯನ್ನು…

Read More

ಶಿಡ್ಲಘಟ್ಟ ತಾಲೂಕು ಪಂಚಾಯತಿ ಇಒ ಮುನಿರಾಜು ಲೋಕಾಯುಕ್ತ ಬಲೆಗೆ..

ಶಿಡ್ಲಘಟ್ಟ: ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ತಾಲೂಕು ಪಂಚಾಯತ್ ಇಒ ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಂಚಾಯತ್ ನಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿ ಗ್ರಾಮದ 39 ಗುಂಟೆ ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ನಂಜೇಗೌಡ ಎಂಬುವರಿಂದ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಅದರಂತೆ ಇಂದು ಒಂದೂವರೆ ಲಕ್ಷ ಹಣ ನೀಡಲು ಮಾತುಕತೆ ನಡೆದಿತ್ತು ಅದರಂತೆ…

Read More

18,000 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ TDR ಅನ್ನು ನಿಯಮ ಬಾಹಿರವಾಗಿ ನೀಡುತ್ತಿರುವ ಬಗ್ಗೆ.

ಬೆಂಗಳೂರು: ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಿರುವ ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಒಟ್ಟು 13,96,742 ಚ. ಅಡಿಗಳಷ್ಟು ಜಾಗಕ್ಕೆ 1,396 (ಸಾವಿರದ ಮುನ್ನೂರಾ ತೊಂಬತ್ತಾರು) ರೂಪಾಯಿಗಳಷ್ಟು ಮೌಲ್ಯದ TDR ಅನ್ನು ನೀಡಲಾಗುತ್ತಿದೆ ಎಂಬ ತಪ್ಪು ಮಾಹಿತಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾಧ್ಯಮಗಳಿಗೆ ನೀಡಿರುತ್ತದೆ. ಆದರೆ, ವಾಸ್ತವವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 13,96,742 ಚ. ಅಡಿಗಳಷ್ಟು ವಿಸ್ತೀರ್ಣದ ಸ್ವತ್ತಿಗೆ ನೀಡುತ್ತಿರುವ TDR ನ ಒಟ್ಟು ಮೌಲ್ಯ ಕನಿಷ್ಠ…

Read More