BREAKING NEWS

2024ರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ

ಧಾರವಾಡ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾಕೋತ್ತರ ಪದವಿ ಮತ್ತು ಡಿಪ್ಲೋಮಾ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅಗತ್ಯ ಮಾಹಿತಿ ನೀಡುವ ಬಿತ್ತಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಹಾಗೂ ಇತರರು ಸಾಮಾಗ್ರಿಗಳನ್ನು ಬಿಡುಗಡೆ ಮಾಡಿ ಯುವ ನಿಧಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು. ಯುವ ಜನತೆಯ ಭವಿಷ್ಯಕ್ಕಾಗಿ…

Read More

ಮತದಾರಪಟ್ಟಿ ಪರಿಷ್ಕರಣೆ ವೀಕ್ಷಕರಾದ ಎನ್.ಜಯರಾಂ ಭೇಟಿ ; ಅಧಿಕಾರಿಗಳೊಂದಿಗೆ ಸಭೆ

ಧಾರವಾಡ ಜಿಲ್ಲೆಯ ಮತದಾರ ಪಟ್ಟಿ ಪರಿಷ್ಕರಣೆ ವೀಕ್ಷಕರಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎನ್.ಜಯರಾಂ ಅವರು ಇಂದು ಧಾರವಾಡ ಜಿಲ್ಲೆಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಮಾಡಿದರು. ಅವರು ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಜಿಲ್ಲೆಯ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಿಯಮಾನುಸಾರ ಜರುಗಬೇಕು. ಸಹಾಯಕ ಚುನಾವಣಾಧಿಕಾರಿಗಳು ಮತದಾರ ಪಟ್ಟಿ ಪರಿಷ್ಕರಣೆ ಮೇಲುಸ್ತುವಾರಿ ವಹಿಸಿ, ಪರಿಶೀಲಿಸಬೇಕು. ಮತದಾರರ ಹೆಸರು, ಅಡ್ಡಹೆಸರು, ವಯಸ್ಸು ಅರ್ಜಿ ನಮೂನೆ-8 ರ ಅನುಸಾರ ದಾಖಲಿಸಬೇಕು ಎಂದು ಹೇಳಿದರು….

Read More

ಧಾರವಾಡ ಜನವರಿ 26 ರ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆ

ಧಾರವಾಡ ಬರುವ ಜನವರಿ 26 ರಂದು ಜರುಗುವ ಗಣರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪೊಲೀಸ್, ಶಿಕ್ಷಣ ಹಾಗೂ ಇತರ ಇಲಾಖೆಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 26 ರ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ಜರುಗಿಸಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಗಣರಾಜ್ಯೋತ್ಸವದಂದು ಬೆಳಿಗ್ಗೆ 7:30 ಗಂಟೆಗೆ ಶಾಲಾ-ಕಾಲೇಜುಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8:30 ಗಂಟೆಗೆ…

Read More

ಹಿರಿಯ ಕಲಾವಿದೆ ಯಮುನಾಬಾಯಿ ಕಲಾಚಂದ್ರ‌ ಅವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಶುಕ್ರವಾರ ಜಾನಪದ ಸಣ್ಣಾಟ ಕ್ಷೇತ್ರದಲ್ಲಿ ಅನುಪಮ‌ ಸೇವೆಯನ್ನು ಸಲ್ಲಿಸಿರುವ ಚಿಕ್ಕೋಡಿ ತಾಲ್ಲೂಕಿನ ಧುಳಗನವಾಡಿ ಗ್ರಾಮದ ಯಮುನಾಬಾಯಿ ಲಕ್ಷ್ಮಣ ಕಲಾಚಂದ್ರ ಅವರಿಗೆ ರಾಜ್ಯ ಸರಕಾರವು 2024 ನೇ ಸಾಲಿನ “ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ” ಯನ್ನು ನೀಡಿ ಗೌರವಿಸಿದೆ ಜಾನಪದ ಕಲಾಕ್ಷೇತ್ರದಲ್ಲಿ ಅನುಪಮ‌ ಸೇವೆಯನ್ನು ಶ್ಲಾಘಿಸಿದ ಸಚಿವರು, ಇವರ ಸೇವೆಯನ್ನು ಗುರುತಿಸಿ ಸರಕಾರವು ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿದೆ ಎಂದು ಹೇಳಿದರು. ಅನಿವಾರ್ಯ ಕಾರಣಗಳಿಂದ ನವೆಂಬರ್ 1…

Read More

ಶಿರಸಂಗಿ ವಿವಿಧ್ದೂದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ಶಿರಸಂಗಿ ವಿವಿಧ್ದೂದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆದು ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಗಾರ ಮತಕ್ಷೇತ್ರದಿಂದ ಆಯ್ಕೆಯಾದ ಕಲ್ಲನಗೌಡ ಬಸನಗೌಡ ಪಾಟೀಲ. ನಾಗಪ್ಪ ಬಸಪ್ಪ ಹೂಲಿ ಬಸಯ್ಯಾ ಚಂದ್ರಯ್ಯಾ ಶಿರಕೋಳಮಠ, ಮಲ್ಲಿಕಾರ್ಜುನ ಹನುಮಂತಪ್ಪ ಪೂಜಾರ, ಮಹಾಂತೇಶ ಶಿದ್ದಪ್ಪ ಪಂಚೆನವರ ಮತ್ತು ಸಾಮಾನ್ಯ ಸಾಲಗಾರರ ಮಹಿಳಾ ಮತ ಕ್ಷೇತ್ರದಿಂದ ಶ್ರೀಮತಿ ಮಹಾದೇವಿ ನೀಲಪ್ಪ ಬೆನಕಟ್ಟಿ, ಮತ್ತು ಶ್ರೀಮತಿ ಸುಮಿತ್ರಾ ಮಲ್ಲಿಕಾರ್ಜುನ ಗೊರವನಕೊಳ್ಳ, ಹಾಗೂ ಸಾಮಾನ್ಯ ಸಾಲಗಾರರ…

Read More

ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಿಸಿ ಕೆಇಎ ಐತಿಹಾಸಿಕ ದಾಖಲೆ

ಈ ವರ್ಷದಲ್ಲಿ 17 ನೇಮಕಾತಿ ಪರೀಕ್ಷಾ ಫಲಿತಾಂಶ ಪ್ರಕಟಿಸಿ 30 ವರ್ಷದಲ್ಲೇ ಐತಿಹಾಸಿಕ ದಾಖಲೆ ಬರೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಒಂದು ವರ್ಷದಲ್ಲಿ 20 ಲಕ್ಷಕ್ಕೂ ಅಧಿಕ ಅರ್ಜಿಗಳ ನಿರ್ವಹಿಸಿ, 6,052 ಅಭ್ಯರ್ಥಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಿದೆ.!! ವಿವಿಧ ನಿಗಮ ಮಂಡಳಿಗಳಲ್ಲಿನ ಹುದ್ದೆಗಳ ನೇಮಕಾತಿ, 2 PSI ನೇಮಕಾತಿ, KFC, BMTC, KPCL, VAO, KSET ಸೇರಿದಂತೆ 17 ನೇಮಕಾತಿಗಳ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ.!!

Read More

ಉಳವಿ ಚನ್ನಬಸವೇಶ್ವರ ದೇವಸ್ಥಾನ ರಸ್ತೆ ದುರಸ್ತಿಗೆ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಬೆಳಗಾವಿ : ಉಳವಿ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು ಭಕ್ತರು ತೊಂದರೆ ಅನುಭವಿಸುತ್ತಿದ್ದು ಕೂಡಲೇ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು ಸೋಮವಾರ ಭೇಟಿಯಾದ ಕರವೇ ಸದಸ್ಯರು ಸುಕ್ಷೇತ್ರ ಉಳವಿ ದೇವಸ್ಥಾನಕ್ಕೆ ಧಾರವಾಡ ಹುಬ್ಬಳ್ಳಿ ಬೆಳಗಾವಿ ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರ ಆಗಮಿಸುತ್ತಾರೆ ಮಳೆಯಿಂದ ಫೋಟೋಳ್ಳಿ ಕ್ರಾಸ್ ನಿಂದ ಗುಂದ ಮಾರಕವಾಗಿ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ…

Read More

ಸೈಬರ್ ವಂಚನೆಗೊಳಗಾದರೆ ತಕ್ಷಣ 1039ಗೆ ಕರೆ ಮಾಡಿ

ಬೆಂಗಳೂರು: ಸೈಬರ್ ವಂಚನೆಗೆ ಯಾರೇ ಒಳಗಾದರೂ ಕೂಡಲೇ 1039 ಗೆ ದೂರು ನೀಡಿದರೆ ಆ ಕರೆ ಎಲ್ಲಿಂದ ಬಂತು, ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ, ಸೈಬರ್ ವಂಚನೆಯಿಂದ ನಿಮನ್ನು ರಕ್ಷಿಸಬಹುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಜಿಟಲ್ ಅರೆಸ್ಟ್, ಹೋಂ ಅರೆಸ್ಟ್ ಎಂದು ಯಾರೇ ಕರೆ ಮಾಡಿದರೆ ತಕ್ಷಣ ಆ ಕರೆಯನ್ನು ಸ್ಥಗಿತಗೊಳಿಸಿ ಸ್ಥಳೀಯ ಪೊಲೀಸರಿಗಾಗಲೀ, ಸೈಬರ್ ಪೊಲೀಸರಿಗಾಗಲೀ ತಿಳಿಸಬೇಕು. ನೀವು ಒಂದು ವೇಳೆ ಅಂತಹ ಕರೆಯನ್ನು…

Read More

ಮಾಜಿ ಪ್ರಧಾನಿ ಡಾ|| ಮನಮೋಹನ ಸಿಂಗ್ ರವರಿಗೆ ಶ್ರದ್ಧಾಂಜಲಿ

ಡಾ. ಮನಮೋಹನ್ ಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಡಾ. ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು. ಮನಮೋಹನ್…

Read More

ಕೂಡ್ಲಿಗಿ:ಮಾಜಿ ಪ್ರಧಾನಿ ದಿ॥ಡಾ॥ಮನಮೋಹನ್ ಸಿಂಗ್ ರವರಿಗೆ ಶ್ರದ್ಧಾಂಜಲಿ

ವಿಜಯನಗರ ಜಿಲ್ಲೆ ಕೂಡ್ಲಿಗಿ: ಡಿ27ರಂದು ಬೆಳಿಗ್ಗೆ ಪಟ್ಟಣದ ಹಲವೆಡೆ ಮತ್ತು ತಾಲೂಕಿನ ವಿವಿದೆಡೆಗಳಲ್ಲಿ. ಡಿ26ರಂದು ನಿಧನರಾದ ಮಾಜಿ ಪ್ರಧಾನಿಗಳು, ಹಾಗೂ ಭಾರತೀಯ ಅರ್ಥಶಾಸ್ತ್ರಜ್ಞರಾದ. ದಿ” ಡಾ॥ ಮನಮೋಹನ್ ಸಿಂಗ್ ರವರಿಗೆ, ನುಡಿನಮನ ಹಾಗೂ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪಟ್ಟಣದ ಮದಕರಿ ವೃತ್ತದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರು ಸೇರಿದಂತೆ, ವಿವಿದ ಪಕ್ಷಗಳ ಮುಖಂಡರು ವಿವಿದ ಜನಪ್ರತಿನಿಧಿಗಳು ಹಿರಿಯನಾಗರೀಕರು. ದಿವಂಗತ ಮಾಜಿ ಪ್ರಧಾನಿಗಳಾದ ದಿ”ಡಾ॥ ಮನಮೋಹನ್ ಸಿಂಗ್ ರವರಿಗೆ, ನುಡಿನಮನ ಹಾಗೂ ಶ್ರದ್ಧಾಂಜಲಿ ಅರ್ಪಿಸಿದರು. ಮನಮೋಹನ ಸಿಂಗ್ ರವರ ಭಾವಚಿತ್ರಕ್ಕೆ ಪುಷ್ಪ…

Read More