BREAKING NEWS

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ  ಮಾಡಿದರು

ಮುಖ್ಯಮಂತ್ರಿ ಸಿದ್ಧರಾಮಯ್ಯನವರು  ಹೊಸಪೇಟೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿಯನ್ನು ಸಸಿಗಳಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು  ಒಟ್ಟು ರೂ 4.6 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಿಸಲಾಗಿದೆ. 27ಸೆಪ್ಟೆಂಬರ್ 2022 ರಂದು ಕಾಮಗಾರಿ ಪ್ರಾರಂಭಿಸಿ, 28 ಆಗಸ್ಟ್ 2023 ಕ್ಕೆ ಪೂರ್ಣಗೊಳಿಸಲಾಗಿದೆ. ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣಕ್ಕೆ ಒಟ್ಟು 3 ಎಕರೆ ಜಮೀನು ಮಂಜೂರು ಮಾಡಲಾಗಿದೆ….

Read More

ಫೆಬ್ರುವರಿ 5 ರಂದು ನಡೆಯಲಿರುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶದ ಸಿದ್ಧತೆ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ನಿತಿಶ್ ಪಾಟೀಲ್

ಪೂರ್ವಭಾವಿ ಸಭೆಯ ಬಳಿಕ ಸರದಾರ ಹೈಸ್ಕೂಲ್ ಮೈದಾನಕ್ಕೆ ಭೇಟಿ ನೀಡಿದ ಶಾಸಕ ಆಸಿಫ್  ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿರುವುದರಿಂದ ಊಟ, ಕುಡಿಯುವ ನೀರು, ಪಾರ್ಕಿಂಗ್ ಮತ್ತಿತರ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಗರದಲ್ಲಿಯೇ ಸಮಾವೇಶ ನಡೆಯಲಿರುವುದರಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ…

Read More

ಬಜೆಟ್ 2024: ಎಚ್ಚರಿಕೆ, ಬ್ಯಾಂಕ್‌ಗಳಿಗೆ ಹೊಸ ನಿಯಮಗಳು. ಗ್ರಾಹಕರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ವಿಷಯ

ಬಜೆಟ್ 2024: ಎಚ್ಚರಿಕೆ, ಬ್ಯಾಂಕ್‌ಗಳಿಗೆ ಹೊಸ ನಿಯಮಗಳು. ಪ್ರತಿ ತಿಂಗಳ ಮೊದಲ ದಿನ ದೇಶದಲ್ಲಿ ಆರ್ಥಿಕ ವಹಿವಾಟಿನ ಜತೆಗೆ ಹಲವು ಬದಲಾವಣೆಗಳು ಆಗುತ್ತಿವೆ. ಹೊಸ ವರ್ಷಕ್ಕೆ ಜನವರಿ ತಿಂಗಳು ಮುಗಿದಿದೆ.. ಈಗ ಫೆಬ್ರವರಿ ತಿಂಗಳು ಬಂದಿದೆ.. ಈ ತಿಂಗಳುಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.. NPS ನಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಠೇವಣಿ ಮಾಡಿದ ಮೊತ್ತದ ಶೇಕಡಾ 25 ರಷ್ಟು ಮಾತ್ರ ಹಿಂಪಡೆಯಲು ಅವಕಾಶವಿದೆ.. ಡಿಕ್ಲರೇಶನ್ ಫಾರ್ಮ್ ಅನ್ನು ಸಹ ಮೊದಲು ಸಲ್ಲಿಸಬೇಕು. ಅಷ್ಟೇ ಅಲ್ಲ ಬ್ಯಾಂಕ್ ಗಳಿಗೆ ಹೊಸ ನಿಯಮಗಳು…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ? ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ…

Read More

ಚಕ್ಕಡಿಯಲ್ಲಿ ಹೋಗುವಾಗ  ಹಿಂದಿನಿಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸಾವು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಳಿಶುಕ್ರವಾರ ನಸುಕಿನ ಜಾವದಲ್ಲಿ ಹೊಲಕ್ಕೆ ಜೋಳ ಕೀಳಲು ಚಕ್ಕಡಿಯಲ್ಲಿ ಹೋಗುವಾಗ  ಹಿಂದಿನಿಂದ ವೇಗವಾಗಿ ಬಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಚಕ್ಕಡಿ ಮುರಿದು ಎರಡು ಎತ್ತುಗಳಿಗೆ ಗಾಯವಾಗಿದೆವಾಹನ ಬಾಗಲಕೋಟ ಕಡೆಯಿಂದ ಬೆಳಗಾವಿಗೆ ಹೋಗುತ್ತಿದ್ದು ಚಕ್ಕಡಿ ಸಾಲಹಳ್ಳಿಯಿಂದ ಹೊಲಕ್ಕೆ ಹೋಗುವಾಗ ಈ ಘಟನೆ ಸಂಭವಿಸಿದೆ ಬಾಗಲಕೋಟ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಚಕ್ಕಡಿಯ ಮೇಲೆ ಪಿಕಪ್ ವಾಹನ ಹರಿದು ಸ್ಥಳದಲ್ಲಿಯೇ ರೈತರ ಮಹಿಳೆ ಮೃತಪಟ್ಟಿದ್ದು ನಾಲ್ವರು ರೈತರು ತೀವ್ರ…

Read More

ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗೇಟ್ ರಿಪೇರಿ ಕ್ಯಾಟಲ್ ಟ್ರಾಪ್ ಹೆಸರಿನಲ್ಲಿ ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳಪೆ ಮಟ್ಟದ ಕಾಮಗಾರಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಗೇಟ್ ರಿಪೇರಿ ವಾಟರ್ ಪ್ರೂಫಿಂಗ್ ಮತ್ತು ಕ್ಯಾಟಲ್ ಟ್ರಾಪ್ ನಿರ್ವಹಣೆ ಎಂದು 2022-2023ನೇ ಸಾಲಿನ ತಾಲೂಕ ಪಂಚಾಯತ್ ಅನಿರ್ಬಂಧಿತ ಅನುದಾನದ ಅಡಿಯಲ್ಲಿ494893 ರೂಪಾಯಿ ಅನುದಾನವನ್ನು ಗುತ್ತಿಗೆದಾರರಾದ ಪಿ ಎಸ್ ಬನ್ನೂರ್ ಅವರು ಕಾಮಗಾರಿ ಮಾಡಿದ್ದು ಸಂಪೂರ್ಣ ಕಳೆಪೆ ಆಗಿದ್ದು ಇರುತ್ತದೆ. ಇವರು ನಿರ್ಮಾಣ ಮಾಡಿದ ಕ್ಯಾಟಲ್ ಟ್ರಾಪ್ ಸಂಪೂರ್ಣ ಕಳಪೆ ಮಟ್ಟದಲ್ಲಿದ್ದು ಪ್ರಾಥಮಿಕ ಕೇಂದ್ರಕ್ಕೆ ಬರುವ…

Read More

ಬೆಳಗಾವಿಯಲ್ಲಿ 89,60,537 ರೂ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು

ಬೆಳಗಾವಿ ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ದಾಖಲಿಸಿರುವ 101 ಪ್ರಕರಣಗಳಲ್ಲಿ ಜಪ್ತುಪಡಿಸಿರುವ ಗೋವಾ ಮದ್ಯ 18297 ಲೀ, ಬಿಯರ್ 4061ಲೀ, ಕಳ್ಳಭಟ್ಟಿ 665ಲೀ ಇವುಗಳನ್ನು ಮುಟ್ಟುಗೋಲು ಹಾಕಿಕೊಂಡು, ಒಟ್ಟು ಅಂದಾಜು 89,60,537 ರೂ ಮೌಲ್ಯದ ಮದ್ಯವನ್ನು ನಿಯಮಾನುಸಾರ ಹಾಗೂ ಮಾದ್ಯಮಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು ಈ ಸಂದರ್ಭದಲ್ಲಿ ಮಾನ್ಯ ಅಬಕಾರಿ ಉಪ ಆಯುಕ್ತರು ಬೆಳಗಾವಿ ದಕ್ಷಿಣ ಜಿಲ್ಲೆ ಮಾನ್ಯ ಅಬಕಾರಿ ಉಪ ಅಧೀಕ್ಷಕರು ಅಬಕಾರಿ ಉಪನಿರೀಕ್ಷಕರು. ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು

Read More

ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ..!

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ  ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ  ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40 ಸಾವಿರದಿಂದ ಒಂದು ಲಕ್ಷದವರೆಗೆ ಸಹಸ್ರಾರು ಭಕ್ತರು ಬರುವರು…

Read More

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ…

Read More

ಭಾರತ ವಿರೋಧಿ ನಡೆ: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಪದಚ್ಯುತಿ ಪ್ರಕ್ರಿಯೆಗೆ ಚಾಲನೆ!

ಮಾಲಿ(ಮಾಲ್ಡೀವ್ಸ್): ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ(MDP), ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗ ಅಂದರೆ ಇಂಪೀಚ್‌ಮೆಂಟ್‌ ನಿರ್ಣಯವನ್ನು ಸಲ್ಲಿಸಲು ಸಜ್ಜಾಗಿದೆ. ನಿನ್ನೆ ಭಾನುವಾರ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಝು ಸಂಪುಟಕ್ಕೆ ಅಟಾರ್ನಿ ಜನರಲ್ ಅಹ್ಮದ್ ಉಶಮ್, ಆರ್ಥಿಕ ಸಚಿವ ಮೊಹಮ್ಮದ್ ಸಯೀದ್, ವಸತಿ ಸಚಿವ ಅಲಿ ಹೈದರ್ ಮತ್ತು ಇಸ್ಲಾಮಿಕ್‌ ಸಚಿವ ಡಾ. ಮೊಹಮ್ಮದ್ ಶಹೀಮ್ ಅಲಿ ಸಯೀದ್ ಅವರನ್ನು ಸೇರಿಸಿಕೊಳ್ಳುವ ವಿಚಾರವಾಗಿ ಸಂಸತ್ತಿನಲ್ಲಿ ವಾಗ್ವಾದ ನಡೆದಿದ್ದು ಅಲ್ಲದೆ…

Read More