BREAKING NEWS

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಧಾರವಾಡ ಕನ್ನಡ ಮಾಧ್ಯಮದ ಸಾಧಕ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸ: ಸಂಗಮೇಶ ಬಬಲೇಶ್ವರ . ಕನ್ನಡ ನಾಡು ನುಡಿ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು ಕನ್ನಡದ ಆಸ್ಮಿತೆಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಕನ್ನಡ ಭಾಷೆಯನ್ನ ಬಳಸಬೇಕು ಮತ್ತು ಬೆಳೆಸಬೇಕು ಆ ನಿಟ್ಟಿನಲ್ಲಿ ನಾಡಿನ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರಲ್ಲದೆ ನಾಡಿನ ಕನ್ನಡ ಮಾಧ್ಯಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆದು 625 ಕ್ಕೆ 625 ಅಂಕ…

Read More

ಕಲ್ಲಾಪೂರ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಆಚರಣೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಕಲ್ಲಾಪೂರ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಣೆ ಮಾಡಿದರು. ಅಧ್ಯಕ್ಷತೆ ಪ್ರಧಾನ ಗುರುಗಳು ಪಿ.ಎಂ ದೀಕ್ಷಿತ ಸರ್. ಮುಖ್ಯ ಅತಿಥಿಗಳು ಬಸವರಾಜ ಕಡಕೋಳ ಎಸ್ ಡಿ ಎಂ ಸಿ ಸದಸ್ಯರು ಸ. ಮಾ. ಪ್ರಾ. ಶಾಲೆ ಕಲ್ಲಾಪೂರ. ಈ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿಗಳು ರಾಜ್ಯೋತ್ಸವದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾದ ಬಸವರಾಜ್ ಕಡಕೋಳರವರು ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡುತ್ತಾ ಕನ್ನಡ ನಾಡು-ನುಡಿಯ ಬಗ್ಗೆ ಎಲ್ಲರೂ…

Read More

ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ

ರಾಮದುರ್ಗ :ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರ ಜಿಲ್ಲೆಯ ನಿಡಗುಂದಿಯ ಗ್ರಾಮೀಣ ವಿದ್ಯಾವರ್ಧಕ ಸಂಘದ ಎಂ ಎಸ್ ನಾಗಠಾಣ್ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಜರುಗಿದ 2025 -26 ನೇ ಸಾಲಿನ ಅಂತರ ಕಾಲೇಜ್ ಏಕ ವಲಯ ಮಹಿಳಾ ಟೇಬಲ್ ಟೆನಿಸ್ ಕ್ರೀಡಾಕೂಟದಲ್ಲಿ ರಾಮದುರ್ಗದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದೆ.ಕುಮಾರಿ ಉಮ್ಮಿ ಸಾನಿಯಾ ನಾಸಿಪುರ, ಲಕ್ಷ್ಮೀಬಾಯಿ ಬಾರಕೇರ ಮತ್ತು ವಿದ್ಯಾಶ್ರೀ ಬಡಿಗೇರ್ ವಿದ್ಯಾರ್ಥಿನಿಯರು ಭಾಗವಹಿಸಿ…

Read More

ರಾಮದುರ್ಗದ ಎಸ್ಐಎಸ್ ವಾಯ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕ ಡಾ. ರಾಜು ಕಂಬಾರರನ್ನು ಸತ್ಕರಿಸಲಾಯಿತು.

ರಾಮದುರ್ಗ: ಕನ್ನಡ ಭಾಷೆ ಮತ್ತು ಸಂಸ್ಕೃತಿ ವಿಶ್ವದಲ್ಲಿ ಅತ್ಯಂತ ಶ್ರೀಮಂತವಾಗಿದ್ದು, ವಿದ್ಯಾರ್ಥಿಗಳು ಕನ್ನಡ ನಾಡು-ನುಡಿಯ ಪ್ರಜ್ಞಾವಂತಿಕೆಯನ್ನು ಬೆಳೆಸಿಕೊಳ್ಳಬೇಕೆಂದು ಸಾಹಿತಿ- ಕನ್ನಡ ಉಪನ್ಯಾಸಕ ಡಾ. ರಾಜು ಕಂಬಾರ ಹೇಳಿದರು.

Read More

ಬದುಕಿನ ಮೌಲ್ಯಗಳನ್ನು ತಮ್ಮ ಸಾಹಿತ್ಯದ ಮೂಲಕ ಗಾಢವಾಗಿ ತೋರಿಸಿಕೊಟ್ಟವರು ಬೇಂದ್ರೆ: ಡಾ. ಮಲ್ಲಿಕಾ ಘಂಟಿ

ಧಾರವಾಡ ಒಬ್ಬ ಕವಿ ಕಾಲಾನಂತರದಲ್ಲಿಯೂ ಇಂದಿನ ಯುವಕರು ಕಥೆ, ಕಾವ್ಯವನ್ನು ಕಟ್ಟುವಂತಹ ರೀತಿಯಲ್ಲಿ ಬದುಕಿದ್ದರು. ಆ ಎಲ್ಲ ಪ್ರಸಂಗಗಳು ಮಾನವೀಯ ನೆಲೆಯೊಳಗೆ ಇರುವಂತಹವುಗಳು ಮತ್ತು ಬದುಕಿನ ಮೌಲ್ಯಗಳನ್ನು ಬಹಳಷ್ಟು ಗಾಢವಾಗಿ ತಮ್ಮ ಸಾಹಿತ್ಯದ ಮೂಲಕ ತೋರಿಸಿಕೊಟ್ಟವರು ಬೇಂದ್ರೆಯವರು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಅವರು ಹೇಳಿದರು. ಧಾರವಾಡ ಡಾ.ದ.ರಾ.ಬೇಂದ್ರೆ ಭವನದಲ್ಲಿ ಧಾರವಾಡ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ದಿಂದ ವರಕವಿ ಡಾ.ದ.ರಾ.ಬೇಂದ್ರೆ ಅವರ 44 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Read More

ಮುದಕವಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಜರಗುವುದು.

ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವ ಮತ್ತು ಜಾತ್ರಾ ಮಹೋತ್ಸವ ಇದೇ ತಿಂಗಳು 27ರಿಂದ 28ರ ವರೆಗೆ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಶ್ರೀ ಶ್ರೀ ಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಉಡಿ ತುಂಬುವ ಕಾರ್ಯಕ್ರಮ ಮಹಾ ಕುಂಭಾಭಿಷೇಕ ರುದ್ರಾಭಿಷೇಕ ಗುಗ್ಗುಳು ಮತ್ತು ಸಾಮೂಹಿಕ ವಿವಾಹಗಳು ಮಹಾರಾತ್ಯೋತ್ಸವ ನೆರವೇರಲಿವೆ. ಈ ಕುರಿತಂತೆ ಸುದ್ದಿಗೋಷ್ಠಿ…

Read More

ಕಲಹಾಳ ಶಾಲೆ ಆವರಣದಲ್ಲಿ ಅಕ್ರಮ ಶೆಡ್‌ಗಳಲ್ಲಿ ವಾಸವಿರುವ ದಲಿತ ಕುಟುಂಬಗಳಿಗೆ ಪರ್ಯಾಯ ನಿವೇಶನದ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದ ಜಾಗೆಯಲ್ಲಿ ಅಕ್ರಮ ಶೆಡ್‌ಗಳಲ್ಲಿ ವಾಸವಿರುವ ದಲಿತ ಕುಟುಂಬಗಳಿಗೆ ಪರ್ಯಾಯ ನಿವೇಶನದ ವ್ಯವಸ್ಥೆ ಕಲ್ಪಿಸಿ, ಶಾಲಾ ಮಕ್ಕಳಿಗೆ ಆಗುತ್ತಿರುವ ಅಡಚಣೆಯನ್ನು ತಪ್ಪಿಸುವಂತೆ ಒತ್ತಾಯಿಸಿ ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.ಎರಡು ದಶಕದ ಹಿಂದೆ ಅತೀಯಾಗಿ ಮಳೆ ಸುರಿದಿದ್ದರಿಂದ ದಲಿತ ಸಮುದಾಯದ ಓಣಿಯಲ್ಲಿ ಮಳೆ ನೀರು ನುಗ್ಗಿದ ಪರಿಣಾಮ ನಿರಾಶ್ರಿತರಾದ ಸುಮಾರು 10 ಕುಟುಂಬಗಳಿಗೆ…

Read More

ಲೋಕಾಪೂರ-ಧಾರವಾಡ ಹೊಸ ರೈಲ್ವೆ ಲೈನ್ ಗೆ ಪ್ರಾಮಾಣಿಕ ಪ್ರಯತ್ನ ನಡದಿದೆ:ಜಗದೀಶ್ ಶೆಟ್ಟರ್

ಬೆಳಗಾವಿ: ಲೋಕಾಪುರದಿಂದ ಧಾರವಾಡಕ್ಕೆ ನೂತನ ರೈಲು ಮಾರ್ಗಕ್ಕಾಗಿ 2019 ರಲ್ಲಿ ನಡೆದ ಸಮೀಕ್ಷೆಯ ವರದಿಯಲ್ಲಿ ಕೆಲವು ಅಂಕಿಸಂಖ್ಯೆಗಳ ವ್ಯತ್ಯಾಸದಿಂದ ಈ ಯೋಜನೆಗೆ ತಡೆ ನೀಡಲಾಗಿತ್ತು. ಈಗ ಮತ್ತೇ ಈ ಯೋಜನೆ ಅನುಷ್ಠಾನಕ್ಕೆ ಬರುವುದು ನಿಶ್ಚಿತ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಹೇಳಿದರು. ರಾಮದುರ್ಗ ತಾಲೂಕ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಮುಖಂಡರುಗಳ ನಿಯೋಗವು ರವಿವಾರ ಸಂಸದ ಜಗದೀಶ್ ಶೆಟ್ಟರಿಗೆ ಅವರ ಕಾಡಾ ಕಚೇರಿಯಲ್ಲಿ ಭೇಟಿ ಮಾಡಿ ಲೋಕಾಪುರದಿಂದ ಧಾರವಾಡ ನೂತನ ರೈಲು ಮಾರ್ಗದ ಯೋಜನೆ…

Read More

ರಾಮದುರ್ಗ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಧ್ವಜದ ಕಟ್ಟಿಯನ್ನು ಮಲ್ಲಣ್ಣ ಯಾದವಾಡ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ರಾಧಾಪೂರ ಪೇಟೆಯಲ್ಲಿ ಶ್ರೀ ದೇವರ ದಾಸಿಮಯ್ಯ ನವರ ವೃತ್ತದ ಹತ್ತಿರ ಎಚ್.ಶಿವರಾಮೇಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಧ್ವಜದ ಕಟ್ಟಿಯನ್ನು ಬೆಳಗಾವಿಯ ಬಿ.ಡಿ.ಸಿ.ಸಿ ಬ್ಯಾಂಕಿನ ನೂತನ ನಿರ್ದೇಶಕರಾದ ಮಲ್ಲಣ್ಣ ಯಾದವಾಡ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಪುರಸಭೆಯ ಮಾಜಿ ಅಧ್ಯಕ್ಷರಾದ ಅಶೋಕ ಸುಳಿಭಾವಿ, ಪುರಸಭೆಯ ಸದಸ್ಯರಾದ ಪ್ರಹ್ಲಾದ ಬಡಿಗೇರ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ವಿನಯ ಚಂದರಗಿ, ಉಪಾಧ್ಯಕ್ಷರುಗಳಾದ ಅಂಬರೀಶ್ ಬಟಕುರ್ಕಿ, ವೆಂಕಣ್ಣ ನಂದಗಾವಿ, ಸಂಗಮೇಶ ನರನೂರ…

Read More

ಕಿತ್ತೂರು ರಾಣಿ‌ ಚನ್ನಮ್ಮ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಿತ್ತೂರು ರಾಣಿ‌ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ತೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರು ಇಡಲು ಕೇಂದ್ರಕ್ಕೆ ಪತ್ರ ಬರೆದು ಒಂದು‌ ವರ್ಷವಾದರೂ ಕೇಂದ್ರ‌ ಸರಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಶನಿವಾರ ನಡೆದ ಮೂರು‌ ದಿನಗಳ ಕಾಲ ನಡೆದ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಿತ್ತೂರು ರಾಣಿ…

Read More