ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಇವರಿಂದ ಸಂಸದರ ಕಚೇರಿ ಉದ್ಘಾಟನೆ
ಹಾಸನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಸಂಸದರ ಕಚೇರಿಯನ್ನು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ಉದ್ಘಾಟಿಸಿದರು. ನೂತನ ಕಚೇರಿಯಲ್ಲಿ ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಮಾಡಿದಬಳಿಕ ಮಾತನಾಡಿದ ಸಚಿವರು ಜನರಿಗೆ ಸುಲಭವಾಗಿ ಸಿಗುವ ನಿಟ್ಟಿನಲ್ಲಿ ಕಚೇರಿಯನ್ನು ಬಳಸಿಕೊಂಡು ಜನರ ಅಹವಾಲು ಸ್ವೀಕರಿಸಿ ಬಗೆಹರಿಸುವ ಮೂಲಕ ಜನರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು. ಪ್ರತಿಯೊಬ್ಬ ಜನಪ್ರತಿನಿಧಿಗಳು ತಮ್ಮ ಅವಧಿಯಲ್ಲಿ ಮಾಡುವ ಒಳ್ಳೆಯ ಕೆಲಸಗಳ ಮೇಲೆ ಅವರ ಹೆಸರು ಚಿರಸ್ಥಾಯಿ…
