ಸರಸ್ವತಪುರ ಸರಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ.
ಧಾರವಾಡ ನಗರದ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ.9 ಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ದಿಢೀರ್ ಭೇಟಿ ನೀಡಿ, ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ, ಶಾಲೆ ಕಟ್ಟಡ ಪರಿಶೀಲಿಸಿದರು. ಶಾಲಾ ಕಟ್ಟಡ ಸೋರಿಕೆ ಕುರಿತು ಸಾರ್ವಜನಿಕ ದೂರು ಹಿನ್ನಲೆಯಲ್ಲಿ ಅವರು ಕಲಘಟಗಿ ರಸ್ತೆಯ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಕಟ್ಟಡ ಸೋರಿಕೆ ಹಾಗೂ ತರಗತಿಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಿದರು. ಪ್ರತಿ ತರಗತಿಗೆ ಹೋಗಿ, ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ವಿತರಿಸಿರುವ ಸಮವಸ್ತ್ರ,…
