BREAKING NEWS

ವಿಶ್ವ ಅರಣ್ಯ ರಕ್ಷಕರ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭ.

ಬಳ್ಳಾರಿ ಪ್ರಾದೇಶಿಕ ವಿಭಾಗ ವತಿಯಿಂದ ನಗರದ ಬೆಳಗಲ್ ಕ್ರಾಸ್‌ನ ಸಸ್ಯ ಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭಕ್ಕೆ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಡಾ.ಸಂಜಯ್ ಬಿಜ್ಜೂರ್ ಚಾಲನೆ ನೀಡಿ ಅವರು ಮಾತನಾಡಿದರು.ದೇಶವು ಪ್ರಗತಿ ಪಥದಲ್ಲಿ ಸಾಗಬೇಕಾದರೆ ನೈಸರ್ಗಿಕ ಸಂಪನ್ಮೂಲ ಅವಶ್ಯಕವಾಗಿದೆ. ದೇಶ ಹಾಗೂ ಮಾನವ ಸಂಪನ್ಮೂಲವನ್ನು ಪ್ರಾಣ ಪಣಕಿಟ್ಟು ಯಾರು ಉಳಿಸಿಕೊಳ್ಳುತ್ತಾರೋ ಅವರನ್ನು ಅರಣ್ಯ ರಕ್ಷಕ ಎಂದು ಕರೆಯಲಾಗುತ್ತದೆ. ಯಾವ ದೇಶ ನೈಸರ್ಗಿಕ ಸಂಪನ್ಮೂಲಗಳ…

Read More

ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಹಿಸಿ ಮಾತನಾಡಿದರು.ಆಗಸ್ಟ್ 15 ರಂದು ನಡೆಯುವ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಸಂಭ್ರಮದಿಂದ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಕಾರ್ಯಕ್ರಮವು ನಗರದ ವಿಮ್ಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ…

Read More

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಉದ್ಘಾಟಿಸಿ ಅವರು ಮಾತನಾಡಿದರು.ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930 ರ ಆ.01 ರಂದು ಜನಿಸಿದರು. ತಮ್ಮ 10 ನೇ ವಯಸ್ಸಿನಲ್ಲಿ ಸವದಿಯ…

Read More

ಎಜುಕಾನ್-2024; ಎರಡು ದಿನಗಳ ಶೈಕ್ಷಣಿಕ ಸಮಾವೇಶದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್

ಬಳ್ಳಾರಿ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜಿ ಎಸ್ ಡಬ್ಲ್ಯೂ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎಜುಕಾನ್-2024 ಎರಡು ದಿನಗಳ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಉದ್ಘಾಟಿಸಿ ಅವರು ಮಾತನಾಡಿದರು.ಶಾಲಾ ಕಾಲೇಜುಗಳಲ್ಲಿ ಮೂಲಭೂತ ಮೂಲಸೌಕರ್ಯ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಕೆಆರ್‌ಡಿಬಿಯ ವಾರ್ಷಿಕ ನಿಧಿಯಲ್ಲಿ ಶೇ.25 ರಷ್ಟು ಹಣಕಾಸು ವಿನಿಯೋಗಿಸಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.2023-24ರ ಆರ್ಥಿಕ ವರ್ಷದಲ್ಲಿ…

Read More

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ : ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ

ಸವದತ್ತಿಯ ನವಿಲುತೀರ್ಥದ ಸುಪರಿಂಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ ನಡೆದ ಮಲಪ್ರಭಾ ಯೋಜನೆಯ 2024-25 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ವಹಿಸಿ ಮಾತನಾಡಿದರು. ಪ್ರತಿ ತಿಂಗಳು ಅಗತಕ್ಕೆ ತಕ್ಕಂತೆ ಯೋಜನೆ ರೂಪಿಸಿ, ಹಳ್ಳ, ಕೆನಾಲ್ ಗಳಿಗೆ ನೀರು ಬಿಡುಗಡೆಗೆ ಅಧಿಕಾರಿಗಳ ಕ್ರಮ ವಹಿಸಬೇಕು. ಕುಡಿಯುವ ನೀರು ಪೂರೈಕೆ ಜೊತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಜಲಾಶಯಗಳಲ್ಲಿ ನೀರಿನ ಮಟ್ಟ,…

Read More

ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್

ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಗಂಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಗಸ್ಟ್ ನಲ್ಲಿ ಮಳೆಯ…

Read More

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ

ಬೆಳಗಾವಿ, ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ.‌ ಇವುಗಳನ್ನು ಸದ್ಬಳಕೆ‌ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಬೆಳಗಾವಿ ನಗರದ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದರು….

Read More

ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಳಗಾವಿ ವಿಭಾಗದ ಪದನಿಮಿತ್ಯ ಕಾರ್ಯದರ್ಶಿ ಸಕ್ರೆಪ್ಪಗೌಡ ಬಿರಾದಾರ ಉದ್ಘಾಟಸಿ ಅವರು ಮಾತನಾಡಿದರು.ಜಿಲ್ಲಾ ಮುಖ್ಯಆಯುಕ್ತ ಗಜಾನನ ಮನ್ನಿಕೇರಿ ಅವರು ಮಾತನಾಡಿ, ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಮೊದಲ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು.ಸವದತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ರಾಮದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ.ಬಳಿಗಾರ ಮಾತನಾಡಿದರು.ಈ ಸಂದರ್ಭದಲ್ಲಿ ಎಲ್.ಆರ್. ಕನಕಪ್ಪನವರ,…

Read More

ಖಾನಪೇಠದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಷೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿ ಮಾತನಾಡಿದರು ಕಾರ್ಖಾನೆ ಷೇರುದಾರರಿಗೆ ಸಿಹಿ ನೀಡಬೇಕೆನ್ನುವ ಉದ್ಧೇಶದಿಂದ ಪ್ರತಿ ವರ್ಷ ಪಂಚಮಿ ಹಬ್ಬದ ಸಂದರ್ಭದಲ್ಲಿ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುತ್ತದೆ ಅನೇಕ ಸಕ್ಕರೆ ಕಾರ್ಖಾನೆಗಳು ನಷ್ಟವನ್ನು ಅನುಭವಿಸುತ್ತಿರುವ ಕಾಲದಲ್ಲಿ ಕಾರ್ಖಾನೆಯನ್ನು ಲೀಸ್ ಪಡೆದ ಪ್ಯಾರಿ ಶುಗರ್ಸ ಆಡಳಿತ ಮಂಡಳಿಗೆ ನಷ್ಟವಾದರೂ ಪ್ರತಿ ವರ್ಷ ಕಾರ್ಖಾನೆ ಷೇರುದಾರರಿಗೆ ಸಿಹಿ…

Read More

ಡಾ. ಮಹಾಂತ ಶಿವಯೋಗಿ ಶ್ರೀಗಳ ಜನ್ಮ ದಿನವನ್ನು ವ್ಯಸನ‌ ಮುಕ್ತ ದಿನವನ್ನಾಗಿ ಆಚರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭಾಗವಹಿಸಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು ಈ ವೇಳೆ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು.“ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ಸೇವನೆಯು ನನಗೆ ಮತ್ತು ಮಾನವ ಸಮಾಜಕ್ಕೆ ಮಾರಕವೆಂದು ಇದರಿಂದ ಮಾನವನ ದೇಹವಲ್ಲದೇ…

Read More