ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭ
ರಾಮದುರ್ಗ ಪಟ್ಟಣದ ಹೊರವಲಯದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ 2023-24 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ ಪಿ.ಎಲ್. ಮಿಸಾಳೆ ಪಾಲ್ಗೊಂಡು ಅವರು ಮಾತನಾಡಿದರು. ದಾಸರು ಹೇಳುವಂತೆ ಮಾನವ ಜೀವನ ದೊಡ್ಡದು. ಇದನ್ನು ಹಾನಿ ಮಾಡಿಕೊಳ್ಳಬೇಡಿರಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಕಾಲೇಜಿಗೆ ಸಮಾಜಕ್ಕೆ ದೇಶಕ್ಕೆ ಕೀರ್ತಿಯನ್ನು ತರಬೇಕು. ವಿದ್ಯಾರ್ಥಿಗಳು ತಂದೆ ತಾಯಿ ಗುರುಗಳನ್ನ ಸ್ಮರಿಸುವದರ ಜೊತೆಗೆ ಈ ದೇಶದ ಸಂವಿಧಾನವನ್ನ ಗೌರವಿಸಬೇಕು…
