ರಾಮದುರ್ಗ: 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದಲ್ಲಿರುವ ಗುರುಭವನದಲ್ಲಿ ತಾಲೂಕಾ ಆಡಳಿತ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಕನ್ನಡ ಶಾಲೆಗಳಲ್ಲಿಂದು ಮಕ್ಕಳ ಕಲಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ. ಕಾಲ ಕಾಲಕ್ಕೆ ತಕ್ಕಂತೆ ಶಿಕ್ಷಣ ಕ್ಷೇತ್ರಕ್ಕೆ ಅನೇಕ ಕಾರ್ಯಕ್ರಮ ಜಾರಿಗೆ ತಂದರು ಪರಿಣಾಮಕಾರಿ ಶಿಕ್ಷಣ ಸುಧಾರಣೆಯಾಗುತ್ತಿಲ್ಲ. ಕನ್ನಡ ಶಾಲೆಯ ಶಿಕ್ಷಕರು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ…
