ಬಾಗಲಕೋಟೆಯಲ್ಲಿ ಪೊಲೀಸ್ ಧ್ವಜ ದಿನಾಚರಣೆ ಮಾಡಲಾಯಿತು.
ಬಾಗಲಕೋಟ ಜಿಲ್ಲೆ ನವನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಎ.ಎಸ್.ಐ ಡಿ.ಸಿ.ಗುಡ್ಡಳ್ಳಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಂದನೆ ಸ್ವೀಕಾರ ಮತ್ತು ಸಾಂಪ್ರದಾಯಿಕ ಕವಾಯತು ವೀಕ್ಷಣೆ ಮಾಡಿದರು.ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ,ಹೆಚ್ಚುವರಿ ಎಸ್ಪಿಗಳಾದ ಪ್ರಸನ್ಮ ದೇಸಾಯಿ, ಮಹಾಂತೇಶ್ವರ ಜಿದ್ದಿ ಹಾಗೂ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
