ಉದ್ಯೋಗ ಮೇಳ ಯಶಸ್ವಿಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಿ; ನಿರ್ಲಕ್ಷ್ಯ, ಉದಾಸೀನತೆ ಸಹಿಸಲ್ಲ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಉದ್ಯೋಗ ಮೇಳ ಯಶಸ್ವಿಗೊಳಿಸಲು ಉದ್ಯೋಗಾಕಾಂಕ್ಷಿಗಳಿಗೆ ಅಗತ್ಯ ಮಾಹಿತಿ ನೀಡಬೇಕು. ಜಿಲ್ಲಾ ಪಂಚಾಯತ ಸಿಇಓ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಉದ್ಯೋಗಮೇಳದ ವಿವಿಧ ಕಾರ್ಯಗಳಿಗೆ ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿಗಳು ತಮಗೆ ವಹಿಸಿದ ಕಾರ್ಯಗಳನ್ನು ಶಿಸ್ತುಬದ್ದವಾಗಿ, ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾರೇ ನಿರ್ಲಕ್ಷ್ಯ, ಉದಾಸೀನತೆ ತೋರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ದಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉದ್ಯೋಗ ಮೇಳ ಯಶಸ್ವಿ ಆಯೋಜನೆಗಾಗಿ…
