ಮನೆ ಮನೆಗೆ ಹೋಗಿ ಮತದಾರರ ಚೀಟಿ ನೀಡಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸೂಚನೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಮಾತನಾಡಿದರು.ಮತದಾನ ದಿನ ಸಮೀಪಿಸುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಕೂಡಲೇ ಮನೆ ಮನೆಗೆ ತೆರಳಿ ಮತದಾರರ ಚೀಟಿ ವಿತರಣೆ ಮಾಡಬೇಕು ಎಂದು ಹೇಳಿದರು.ಮತದಾನ ಜಾಗೃತಿಗಾಗಿ ಅನೇಕ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರಕವಾಗಿ ಬಿಎಲ್.ಓ.ಗಳು ಮನೆಮನೆಗೆ ತೆರಳಿ ಮತದಾರರ ಚೀಟಿ ವಿತರಿಸುವುದರಿಂದ ಮತದಾನ ಪ್ರಮಾಣ ಹೆಚ್ಚಿಸಲು ಸಾಧ್ಯವಾಗಲಿದೆ.ಕಳೆದ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ತಪ್ಪದೇ…
