ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮ ಪರಿಪಾಲಿಸಬೇಕು – ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಅರವಿಂದ್ ಕುಮಾರ್
ನಗರದ ಭಾರತೀಯ ವಿದ್ಯಾಭವನದಲ್ಲಿ ವಕೀಲರ ವಾಹಿನಿ ಮೂಲಕ ಆಯೋಜಿಸಿದ್ದ “ಮಾಧ್ಯಮಗಳ ಸ್ವಾತಂತ್ರ್ಯ ಮತ್ತು ನಿರ್ಬಂಧ, ಸಮತೋಲನ ಕಾಯ್ದೆ” ಕುರಿತು ಜಸ್ಟೀಸ್ ಕೆ.ಆರ್. ಗೋಪಿ ವಲ್ಲಭ ಅಯ್ಯಂಗಾರ್ ಸ್ಮಾರಕ ಉಪನ್ಯಾಸ ನೀಡಿದ ಅವರು, ಮಾಧ್ಯಮ ಸತ್ಯವನ್ನು ಎತ್ತಿ ಹಿಡಿಯಬೇಕು. ಮಾಧ್ಯಮದ ನಾಲಿಗೆಗೆ ಸ್ವಾತಂತ್ರ್ಯವಿರಬಹುದು. ಆದರೆ ವಿವೇಚನೆ ಹೊಂದಿರಬೇಕು. ಸಂಪಾದಕರು, ನಿರೂಪಕರು, ಡಿಜಿಟಲ್ ಪ್ರಭಾವಿಗಳು ಮಾಧ್ಯಮವನ್ನು ಪ್ರಚೋದನೆಗಾಗಿ ಬಳಸಿಕೊಳ್ಳಬಾರದು. ನೈತಿಕ ಸ್ಫೂರ್ತಿಯ ಮೂಲಕ ಸ್ವಧರ್ಮವನ್ನು ಕಾಪಾಡಬೇಕು. ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮವನ್ನು ಪರಿಪಾಲಿಸಬೇಕು. ಪತ್ರಿಕೋದ್ಯಮ ಎಂದರೆ ಸತ್ಯ ಪರಿಶೋಧನೆಯಾಗಿದ್ದು, ಯಾರಿಗೂ ಹಾನಿ…
