ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025ವಿದ್ಯಾರ್ಥಿಗಳು ಸುರಕ್ಷತೆಯಿಂದ ವಾಹನ ಚಲಾಯಿಸಿ; ಸಂಚಾರಿ ನಿಯಮಗಳನ್ನು ಪಾಲಿಸಬೇಕು: ನೂರ್ ಮೊಹಮ್ಮದ್ ಬಾಷಾ
ಧಾರವಾಡ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ರ ಕಾರ್ಯಕ್ರಮವನ್ನುಉಪಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ನೂರ್ ಮೊಹಮ್ಮದ್ ಬಾಷಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ರಸ್ತೆ ಅಪಘಾತಕ್ಕೆ ಕಾರಣ ಹಾಗೂ ಸಂಚಾರಿ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಪೋಷಕರು ತಮ್ಮ ಮಕ್ಕಳಿಗೆ 18 ವರ್ಷ ವಯೋಮಿತಿ ಮೀರಿದ ನಂತರವೇ ವಾಹನ ಚಲಾಯಿಸುವಂತೆ ನೋಡಿಕೊಳ್ಳಬೇಕು. ಎಲ್.ಎಲ್.ಆರ್. ಹಾಗೂ ಡಿ.ಎಲ್. ಪಡೆದ ನಂತರವೇ…
