ಡಿ.27 ರಂದು ಸುವರ್ಣ ವಿಧಾನ ಸೌಧದಲ್ಲಿಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಸಚಿವ ಎಚ್.ಕೆ.ಪಾಟೀಲ ಪರಿಶೀಲಿಸಿದರು.
ಬೆಳಗಾವಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು. ಬೆಳಗಾವಿ ಸುವರ್ಣ ಸೌಧ ಆವರಣದಲ್ಲಿ ಬುಧವಾರ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ,…
