ಸುಕ್ಷೇತ್ರ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೋಡಚಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯವಾಗಿ ಹಮ್ಮಿಕೊಂಡ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಉತ್ತರ ಕರ್ನಾಟಕದ ಧರ್ಮಸ್ಥಳವೆಂದೆ ಖ್ಯಾತಿ ಪಡೆದ ವೀರಭದ್ರೇಶ್ವರನ ಜಾತ್ರೆಗೆ ರಾಜ್ಯ ಹಾಗೂ ಮಹಾರಾಷ್ಟ ಸೇರಿದಂತೆ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.ಗೊಡಚಿ ವೀರಭದ್ರೇಶ್ವರ ದೇವಸ್ಥಾನವು ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಯಾಗಬೇಕು. ಅದಕ್ಕೆ ಇಲ್ಲಿಯ ಆಡಳಿತ ಮಂಡಳಿಯವರು ಮತ್ತು ಗ್ರಾಮದ ಜನರ…
