ಮೈಸೂರ ದಸರಾ ಮಹೋತ್ಸವದ ಜಂಬೂ ಸವಾರಿಗೆ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರ ನಿರ್ಮಾಣ: ಜಿ.ಪಂ. ಸಿಇಓ ಸ್ವರೂಪ ಟಿ.ಕೆ.
ದಾರವಾಡ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಿಂದ ಮೈಸೂರು ಜಂಬೂ ಸವಾರಿಗೆ ಸ್ಥಬ್ದಚಿತ್ರ ನಿರ್ಮಾಣ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.ಅವರು ವಹಿಸಿ, ಮಾತನಾಡಿದರು.ಪ್ರಸಕ್ತ ಸಾಲಿನ ಮೈಸೂರು ದಸರಾದಲ್ಲಿ ಅಕ್ಟೋಬರ 12 ರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರವನ್ನು ರೂಪಿಸಲಾಗುವುದು. ಮೈಸೂರು ದಸರೆಯಲ್ಲಿ ದೇಶ, ವಿದೇಶಗಳ ಜನರು ಭಾಗಬಹಿಸುವುದರಿಂದ ನಮ್ಮ ಜಿಲ್ಲೆಯ…
