ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಶ್ರೀನಿವಾಸಗೌಡ ಪಾಟೀಲ ಅವರ ನೇತೃತ್ವದಲ್ಲಿ ತಾ.ಪಂ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಮತ್ತು ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಸಾಬಿತಾಗಿದ್ದು, ಸರ್ಕಾರದ ನಷ್ಟದ ಹಣವನ್ನು ತಪ್ಪಿತಂಸ್ಥತರಿಂದ ವಸೂಲಿಸದೇ, ಪ್ರಕರಣ ದಾಖಲಿಸದೇ ತಪ್ಪಿತಸ್ಥರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಅವರ ನೇತೃತ್ವದಲ್ಲಿ ಸಾರ್ವಜನಿಕರು ತಾ.ಪಂ ಕಚೇರಿ ಮುಂದೆ ಅನಿರ್ಧಿಷ್ಟಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ವಾಸುದೇವ ಸನ್ನಸತ್ತಿ, ಅಡಿವೆಪ್ಪ ದ್ಯಾಮನ್ನವರ, ಕಾಳಪ್ಪ ಕಮ್ಮಾರ, ನಿಂಗನಗೌಡ ಸಂಗನಗೌಡ್ರ, ಸುಬ್ರಾಯಪ್ಪ ಪೂಜೇರ, ಮಲ್ಲಪ್ಪ ಮದರಖಂಡಿ, ಶಿವಪ್ಪ ಯಂಡಿಗೇರಿ, ಮಲ್ಲಿಕಾರ್ಜುನ ರಾಮದುರ್ಗ,…
