BREAKING NEWS

ಸಚಿವ ಈಶ್ವರ್ ಖಂಡ್ರೆರವರಿಂದ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ

ಬಳ್ಳಾರಿ ನಗರದ ಮಾಜಿ ವಿಧಾನ ಪರಿಷತ್ ಸದಸ್ಯರು ವೀರಶೈವ ಮಹಾಸಭಾದ ಹಿರಿಯ ನಾಯಕರಾದ ಎನ್. ತಿಪ್ಪಣ್ಣ ಅವರ ನಿವಾಸದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅರಣ್ಯ ಪರಿಸರ ಇಲಾಖೆಯ ಸಚಿವರಾದ ಈಶ್ವ‌ರ್ ಖಂಡ್ರೆ ಅವರು ಆಗಮಿಸಿ ಬಳ್ಳಾರಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಬಳ್ಳಾರಿ ಘಟಕದ ಪದಾಧಿಕಾರಿಗಳು ನೇಮಕವಾಗಿದ್ದರಿಂದ, ಇವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ನಿಕಟಪೂರ್ವ ಉಪಾಧ್ಯಕ್ಷರು ಹಾಗೂ ರಾಜ್ಯ ಘಟಕದ ಅಧ್ಯಕ್ಷರಾದ ಎನ್.ತಿಪ್ಪಣ್ಣ ಅವರು…

Read More

ಮಾನವೀಯತೆ ಮೆರೆದ ಟೂರಿಸ್ಟ್ ಪೊಲೀಸ್ ಸಿಬ್ಬಂದಿಗಳು

ರಾಜಸ್ಥಾನದ ಜೋದಪುರ ಜಿಲ್ಲೆಯ ಸುಮಿತ್ರ ಗಂಡ ಕೃಷ್ಣ 55 ವರ್ಷದ ಭಕ್ತರು ಅಂಜನಾದ್ರಿಯ ದರ್ಶನಕ್ಕೆ ಬಂದಿದ್ದರು ದರ್ಶನ ಪಡೆದ ನಂತರ ಅವರಿಗೆ ಉಸಿರಾಟದ ತೊಂದರೆಯಾಗಿ ಶುಗರ್ ಮತ್ತು ಬಿಪಿ ಕಡಿಮೆಯಾಗಿ ಅಸ್ವಸ್ಥಗೊಂಡಿದ್ದರು ಸುದ್ದಿ ತಿಳಿದ ತಕ್ಷಣ ಪ್ರವಾಸಿ ಮಿತ್ರ,ಟೂರಿಸ್ಟ್ ಪೋಲೀಸರಾದ ನಿರುಪಾದಿ ಭೋವಿ ಹಾಗೂ ಹನುಮಂತಪ್ಪ ಬಿ ಹಾಗೂ ದೇವಸ್ಥಾನದ ಸಿಬ್ಬಂದಿ, ಹನುಮಂತ, ಸಂತೋಷ, ಸಿದ್ದು, ಪರಶುರಾಮ ಹಾಗೂ ಮುತ್ತಣ್ಣ ಸೇರಿ ಬೆಟ್ಟದ ಮೇಲೆ ಪ್ರತಮ ಚಿಕಿತ್ಸೆ ನೀಡಿ ಸ್ಟಚ್ಚರ್ ಮೂಲಕ ಬೆಟ್ಟದ ಮೇಲಿಂದ ಕೆಳಗಡೆ ತೆಗೆದುಕೊಂಡು…

Read More

ಕೊಟ್ಟೂರು:ಚೆಕ್ ಡ್ಯ‍ಾಂ ಕಾಮಗಾರಿ ಕಳಪೆ, ತನಿಖೆ ಮಾಡಿ-ಇಒಗೆ ರೈತ ಮುಖಂಡ ಒತ್ತಾಯ

ವಿಜಯನಗರ ಜಿಲ್ಲೆ ಕೊಟ್ಟೂರು:ತಾಲೂಕಿನ ನಾಗರಕಟ್ಟೆ ಹಾಗೂ ಕೆಐನಹಳ್ಳಿ ವ್ಯಾಪ್ತಿಯ, ಹಳ್ಳಗಳ ಬದುವಿನಲ್ಲಿ ಕೃಷಿ ಚೆಕ್ ಡ್ಯಾಂ ನಿರ್ಮಾಣದಲ್ಲಿ. ಭಾರೀ ಅವ್ಯವಹಾರ ನಡೆದಿದೆ ತನಿಖೆ ಮಾಡಿ ಎಂದು, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೋಡಿಹಳ್ಳಿ ಭರ್ಮಣ್ಣ ದೂರಿದ್ದಾರೆ. ಹಳೇ ಚೆಕ್ ಡ್ಯಾಂನ ಕಲ್ಲುಗಳನ್ನೇ ಬಳಸಲಾಗಿದೆ, ಪಕ್ಕದಲ್ಲಿನ ಹಳ್ಳವನ್ನೆ ಅಗೆದು ಬಗೆದು. ಕನಿಷ್ಠ ದರ್ಜೆಯ ಮರಳನ್ನು ಹಾಗೂ ಕಡಿಮೆ ದರ್ಜೆಯ ಸಾಮಾಗ್ರಿಗಳನ್ನು ಬಳಸಲಾಗಿದ್ದು, ಈ ಚೆಕ್ ಡ್ಯಾಂಗಳನ್ನು ಅವೈಜ್ಞಾನಿಕ ರೀತಿಯಲ್ಲಿ ತುಂಬಾ ದುರ್ಭಲರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸಂಬಂಧಿಸಿದಂತೆ…

Read More

ಜಿಲ್ಲೆಯ ಮೊಟ್ಟ ಮೊದಲ ಹ್ಯಾಮ್ ಸ್ಟೇಷನ್ MDRS ಸ್ಕೂಲ್ ಬೀಳಗಿಯಲ್ಲಿ ಆರಂಭ

ಅಂತರಾಷ್ಟ್ರೀಯ ಮಟ್ಟದಲ್ಲಿ ಸಂವಹನ ಮಾಡುವಂತ ಹ್ಯಾಮ್ ಸ್ಟೇಷನ್ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿದೆ. ಇಲ್ಲಿನ ವಿಜ್ಞಾನ ಶಿಕ್ಷಕ ಕೃಷ್ಣಾ ಜೋಶಿ ಹಾಗೂ ಕುಮಾರಿ ರಫೀದಾ ಖಾಜಾಮೈನುದ್ದಿನ ತಹಶಿಲ್ದಾರ್ ಮತ್ತು ಕುಮಾರ್ ವಿನಯ ಬೂಸರಡ್ಡಿ ವಿದ್ಯಾರ್ಥಿಗಳು ಹ್ಯಾಮ್ ಲೈಸೆನ್ಸ್ ಪಡೆದ್ದಾರೆ, ತುರ್ತು ಸಂದರ್ಭದಲ್ಲಿ ಹಾಗೂ ಪರಿಸರದಲ್ಲಿ ಆಗುವ ಅನಾಹುತದ ಸಂದರ್ಭದಲ್ಲಿ ಸಂದೇಶ ರವಾನಿಸಲು ಉಪಯುಕ್ತವಾದ ಸಂವಹಣ ಎಂದು ವಸತಿ ಶಾಲೆಯ ಪ್ರಾಂಶುಪಾಲ ಶೇಖಪ್ಪ ಅರಸನಗಿ ಹೇಳಿದರು. ಗುರುವಾರ ಮೊರಾರ್ಜಿ ದೇಸಾಯಿ ವಸತಿ ಹ್ಯಾಮ್ ಸ್ಟೇಷನ್ ನಲ್ಲಿ…

Read More

ಕಚೇರಿಯಲ್ಲಿ ಹಿರಿಯ ವ್ಯಕ್ತಿಯನ್ನು ಗಂಟೆಗಟ್ಟಲೆ ಕಾಯಿಸಿದ ಸರ್ಕಾರಿ ನೌಕರರಿಗೆ ವಿಶಿಷ್ಟ ಶಿಕ್ಷೆ ನೀಡಿದ ಸಿಇಒ

ಸರ್ಕಾರಿ ನೌಕರರು ಕಛೇರಿಯಲ್ಲಿ ಜನರನ್ನು ಅಲೆದಾಡಿಸುವುದು, ಕಾಯುವಂತೆ ಮಾಡಿಸುವುದು ಹೊಸದೇನು ಅಲ್ಲ ಬಿಡಿ. ಹೆಚ್ಚಿನ ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಲ್ಲೊಂದು ಕಡೆ ಇದೇ ರೀತಿಯ ಘಟನೆ ನಡೆದಿದ್ದು, ಸರ್ಕಾರಿ ಕಛೇರಿಯ ನೌಕರರು ಹಿರಿಯ ವ್ಯಕ್ತಿಯೊಬ್ಬರಿಗೆ ಸರಿಯಾದ ಸೇವೆಯನ್ನು ನೀಡದೆ ಅವರನ್ನು ಗಂಟೆಗಟ್ಟಲೆ ಕಾಯುವಂತೆ ಮಾಡಿದ್ದಾರೆ. ನೌಕರರ ಈ ವರ್ತನೆಯಿಂದ ಗರಂ ಆದ ಸಿಇಒ ನೀವು ಕೂಡಾ ಹೀಗೆಯೇ ನಿಂತ್ಕೊಂಡೇ ಕೆಲಸ ಮಾಡಿ ಎಂದು ಅವರಿಗೆ ಶಿಕ್ಷೆಯ ನೀಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ….

Read More

ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಇವರ ನೇತೃತ್ವದಲ್ಲಿ ಪ್ರತಿಭಟನೆ.

ಬೆಳಗಾವಿ ಸುವರ್ಣಾ ಸೌಧದ ಮುಂಭಾಗದ ಸುವರ್ಣಾ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ಕಾನಿಪ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ವಿವಿಧ ಜಿಲ್ಲಾ ತಾಲೂಕುಗಳ ಅಧ್ಯಕ್ಷರು ಸದಸ್ಯರ ನೇತೃತ್ವದಲ್ಲಿ ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ -ಪಾಸ್ ಹಾಗೂ ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದುಪ್ರತಿಭಟನೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿಯವರಿಗೆ ಮನವಿ ಸಲ್ಲಿಸಿದರು

Read More

ಪತ್ರಕರ್ತರನ್ನು ನಿಂದಿಸಿ ಧಮ್ಕಿ ಹಾಕಿದ ನೆಲಮಂಗಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ವಿರುದ್ದ ಪತ್ರಕರ್ತರ ಪ್ರತಿಭಟನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಪತ್ರಕರ್ತರನ್ನು ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌದ್ರಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿರುವ ವಿಚಾರವಾಗಿ ನೆಲಮಂಗಲ ತಾಲ್ಲೂಕು ಸ್ವಾಭಿಮಾನಿ ಪತ್ರಕರ್ತರುಗಳು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ನೆಲಮಂಗಲ ತಾಲ್ಲೂಕು ಕಚೇರಿ ಎದುರು ಜಗದೀಶ್ ಚೌದ್ರಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ರೌಡಿ ಶೀಟರ್ ಜಗದೀಶ್ ಚೌದ್ರಿರವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ನೆಲಮಂಗಲ ಪತ್ರಕರ್ತರ ಪ್ರತಿಭಟನೆಗೆ ವಕೀಲ್ ಸಾಬ್ ಎಂದೇ ಕ್ಯಾತಿಗಳಿಸಿರುವ ಬಿಗ್ ಬಾಸ್ ಸ್ಪರ್ದಿ ಲಾಯೆರ್ ಜಗದೀಶ್ ರವರು…

Read More

ಸುಕ್ಷೇತ್ರ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೋಡಚಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯವಾಗಿ ಹಮ್ಮಿಕೊಂಡ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಉತ್ತರ ಕರ್ನಾಟಕದ ಧರ್ಮಸ್ಥಳವೆಂದೆ ಖ್ಯಾತಿ ಪಡೆದ ವೀರಭದ್ರೇಶ್ವರನ ಜಾತ್ರೆಗೆ ರಾಜ್ಯ ಹಾಗೂ ಮಹಾರಾಷ್ಟ ಸೇರಿದಂತೆ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.ಗೊಡಚಿ ವೀರಭದ್ರೇಶ್ವರ ದೇವಸ್ಥಾನವು ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಯಾಗಬೇಕು. ಅದಕ್ಕೆ ಇಲ್ಲಿಯ ಆಡಳಿತ ಮಂಡಳಿಯವರು ಮತ್ತು ಗ್ರಾಮದ ಜನರ…

Read More

PAN 2.0 Project ಎಂದರೇನು? ಇದ್ರಿಂದ ಏನೆಲ್ಲಾ ಪ್ರಯೋಜನಗಳಾಗುತ್ತೆ?

ಇಂದು ದೇಶದಲ್ಲಿ ಪಾನ್ ಕಾರ್ಡ್ ಹೊಂದುವುದು ಅತೀ ಅಗತ್ಯವಾಗಿದೆ. ಒಂದೇ ಅರ್ಥದಲ್ಲಿ ಹೇಳುವುದಾದರೆ ಆದಾಯ ಇರುವ ಪ್ರತೀ ವ್ಯಕ್ತಿಗಳು ಪಾನ್ ಕಾರ್ಡ್ ಹೊಂದಿರಲೇ ಬೇಕು. ಅದೂ ಅಲ್ಲದೆ ಈಗಾಗಲೇ ಪಾನ್‌ ಕಾರ್ಡ್‌ ಅನ್ನು ಆಧಾರ್‌ ಜೊತೆ ಲಿಂಕ್‌ ಮಾಡುವುದು ಕೂಡ ಅತ್ಯಗತ್ಯವಾಗಿದೆ. ಇದರ ನಡುವೆಯೇ ಇದೀಗ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಪಾನ್ ಕಾರ್ಡ್‌ನಲ್ಲಿ ಮಹತ್ವದ ಬದಲಾವಣೆ ಹಾಗೂ ಹೆಚ್ಚುವರಿ ಸುರಕ್ಷತೆ, ಸುಲಭ ಹಾಗೂ ಸರಳ ತೆರಿಗೆ ಪಾವತಿ…

Read More

ಕೋವಿಡ್ ಹಗರಣ ಸಂಬಂಧ ಎಫ್‌ಐಆರ್ ದಾಖಲಿಸದಿರುವುದು ಸೇಡಿನ ರಾಜಕಾರಣ: ಜಗದೀಶ್ ಶೆಟ್ಟರ್ ಆರೋಪ

ಮಂಡ್ಯ: ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆ‌ರ್ ದಾಖಲಿಸಿರುವುದು ಕರ್ನಾಟಕ ಸರ್ಕಾರದ ಸೇಡಿನ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ವಾಲ್ಮೀಕಿ ಕಲ್ಯಾಣ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳು ಬಯಲಾಗಿದೆ. ಇದನ್ನು ಮುಚ್ಚಿಹಾಕಲು ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಸೇಡಿನ ರಾಜಕಾರಣ ಮಾಡುವ ಉದ್ದೇಶ ದಿಂದ ಮಾಜಿ ಮಂತ್ರಿಗಳು ಸೇರಿದಂತೆ ಅಧಿಕಾರಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ ಎಂದು ಶೆಟ್ಟ‌ರ್ ದೂರಿದ್ದಾರೆ.

Read More