BREAKING NEWS

ಅಕ್ಟೋಬರ್ 24ರಂದು 5ನೇ ಮಾಹಿತಿ ಹಕ್ಕು ದಿನಾಚರಣೆ ಆಚರಣೆ

ಕುಣಿಗಲ್: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಐದನೇ ವರ್ಷದ ಮಾಹಿತಿ ಹಕ್ಕು ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹೆಚ್ ಜಿ ರಮೇಶ್ ತಿಳಿಸಿದ್ದಾರೆ ಮಾಧ್ಯಮಗಳೊಂದಿಗೆ ಅವರು ಮಾತನಾಡುತ್ತಾ ಪಾರದರ್ಶಕ ಆಡಳಿತ ನೀಡಲು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ನೇರವಾಗಿ ಸಾರ್ವಜನಿಕರು ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ಮಾಹಿತಿ ಪಡೆದು ಅದನ್ನು ಪರಿಶೀಲಿಸಿ ಸಂಬಂಧಪಟ್ಟ…

Read More

ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.

ಬೆಂಗಳೂರು, ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ ಘಟನೆ ಬೆಳಕಿಗೆ ಬಂದಲ್ಲಿ ಅಂತಹ ಶಾಲೆಗಳ ಮಾನ್ಯತೆಯನ್ನುರದ್ದುಪಡಿಸುವುದಾಗಿ ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.ಖಾಸಗಿ ಶಾಲೆಗಳು ಶೇಕಡ 100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನುಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವ ಕುತಂತ್ರ ನಡೆಸಿದಲ್ಲಿ ಶಾಲಾ ಮಾನ್ಯತೆ ಹಾಗೂ ಶಾಲಾ ಸಂಕೇತ ರದ್ದು ಮಾಡಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕಶಾಲಾ…

Read More

ರದ್ದಾದ KAS ಪರೀಕ್ಷಾ ಖರ್ಚು 13.40 ಕೋಟಿ

2024 ಅಗಸ್ಟ್-27 ರಂದು ನಡೆದಿದ್ದ KAS Prelims Exam ನಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ ವಾಗಿದ್ದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಆದರೆ ಆ ಪರೀಕ್ಷೆಗೆ KPSC ಮಾಡಿದ ಒಟ್ಟು ಖರ್ಚು ಬರೋಬ್ಬರಿ 13.40 ಕೋಟಿ ರೂ.!! ಇದರೊಂದಿಗೆ ಪರೀಕ್ಷಾ ಅಭ್ಯರ್ಥಿಗಳಿಂದ Exam ಗೆ ಹೋಗಿ ಬರಲು 20 ಕೋಟಿ ರೂ. ಗಿಂತಲೂ ಅಧಿಕ ವೆಚ್ಚವಾಗಿರಬಹುದೆಂದು ಅಂದಾಜಿಸಲಾಗಿದೆ.!! KAS ಮರು ಪರೀಕ್ಷೆಯನ್ನು 2024 ಡಿಸೆಂಬರ್-29 ರಂದು ನಿಗದಿಪಡಿಸಿದ್ದು ಮರು ಪರೀಕ್ಷೆ ನಡೆಸಲು ಬೇಕು 15 ಕೋಟಿ…

Read More

ರಾಮದುರ್ಗದಲ್ಲಿ ಸುರಿದ ಮಳೆಗೆ ಮನೆ ಮೇಲ್ಮದ್ದಿ ಕುಸಿದು ಬಿದ್ದ ಘಟನೆ ನಡೆದಿದೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ ನಗರದಲ್ಲಿ ವಾಸಿಸುತ್ತಿರುವ ಸಿದ್ದಪ್ಪ ಶಂಕ್ರಪ್ಪ ಅಂಗಡಿ ಎಂಬವರ ಮನೆ ಕಳೆದ ಸುಮಾರು ನಾಲ್ಕೈದು ದಿನ ಸುರಿದ ಮಳೆಗೆ ರವಿವಾರ ಮನೆಯ ಮೇಲ್ಮುದ್ದಿ ಕುಸಿದು ಬಿದ್ದಿರುವ ಘಟನೆ ಸದ್ಯಕ್ಕೆ ಮನೆಯಲ್ಲಿ ವಾಸ ಮಾಡದ ಜನರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದರು.

Read More

ತುರುನೂರು ದಿಂದ ಸುನ್ನಾಳವರೆಗೆ ಅದೇಗೆಟ್ಟ ರಸ್ತೆ : ಯಾಮಾರಿದರೆ ದವಾಖಾನೆ ಬಿಲ್ ಗ್ಯಾರಂಟಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರುನೂರು ದಿಂದ ಸುನ್ನಾಳವರೆಗೆ ಅದೇಗೆಟ್ಟ ರಸ್ತೆ. ರಸ್ತೆ ತುಂಬ ಗುಂಡಿಗಳ ದರ್ಬಾರ್ ಯಾಮಾರಿದರೆ ಕೈಕಾಲು ಮುರಿದು ದವಾಖಾನೆ ಅಡ್ಮಿಟ್ಟೆ ಆಸ್ಪತ್ರೆ ಬಿಲ್ ಗ್ಯಾರಂಟಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಡಚಣೆ ಉಂಟು ಮಾಡಿದೆ ಯಾಮಾರಿದರೆ ದವಾಖಾನೆ ಬಿಲ್ ಗ್ಯಾರಂಟಿ ರಸ್ತೆಯಲ್ಲಿ ಸಂಚರಿಸುವ ಸವಾರರು ಹಿಡಿಶಾಪ…

Read More

ಮಳೆಯಂದಾಗಿ‌ ಹಾನಿಗೊಳಗಾದ‌ ಮನೆಗಳಿಗೆ ಪರಿಹಾರ‌ ವಿತರಣಾ‌ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ‌ ನಿಗಾವಹಿಸಬೇಕು. ವಿಫುಲ್‌‌ ಬನ್ಸಲ್ ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾ‌ ಮಟ್ಟದ ಪ್ರಗತಿ ಪರಿಶೀಲನಾ‌ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ‌ ಉಸ್ತುವಾರಿ ಕಾರ್ಯದರ್ಶಿಗಳಾದ ವಿಫುಲ್ ಬನ್ಸಲ್ ವಹಿಸಿ ಅವರು ಮಾತನಾಡಿದರು. ಅತೀವೃಷ್ಠಿಯಿಂದಾಗಿ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದ ಇಲಾಖೆಗಳು ಜಂಟಿ‌ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ‌ಕೈಗೊಳ್ಳಬೇಕು.ಮಳೆಯಂದಾಗಿ‌ ಹಾನಿಗೊಳಗಾದ‌ ಮನೆಗಳಿಗೆ ಪರಿಹಾರ‌ ವಿತರಣಾ‌ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ‌ ನಿಗಾವಹಿಸಬೇಕು. ಪ್ರತಿ ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸ ಬೇಕು. ಗ್ರಾಮ ಸಭೆಗಳ…

Read More

ಬೆಳಗಾವಿ ವಿಧಾನಮಂಡಳ ಚಳಿಗಾಲ ಅಧಿವೇಶನ: ಪೂರ್ವ ಸಿದ್ಧತೆ ಪರಿಶೀಲನಾ ಸಭೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರಗಿದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ವಹಿಸಿ ಅವರು ಮಾತನಾಡಿದರು. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು. ಸುವರ್ಣ ಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ…

Read More

ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೆöದು ದಿನಗಳಿಂದ ಹಗಲು-ರಾತ್ರಿ ಸುಮಾರು ಗಂಟೆಗಳ ಕಾಲ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ರಾತ್ರಿ ಸುರಿದ ಮಳೆಗೆ ಬೆಟಗೇರಿ ಗ್ರಾಮದ ಮನೆಯೊಂದರ ಗೋಡೆ ಪಕ್ಕದಲ್ಲಿ ನಿಲ್ಲಿಸಿದ ಎರಡು-ಮೂರು ದ್ವಿಚಕ್ರ ವಾಹನಗಳ ಮೇಲೆ ಮನೆಯ ಗೋಡೆ ಕುಸಿದು ನಾಶಗೊಂಡಿವೆ.ಮನೆ ಗೋಡೆಯ ಕಲ್ಲು ಮಣ್ಣು ದ್ವಿಚಕ್ರ ವಾಹನಗಳ ಮೇಲೆ ಬಿದ್ದು ದ್ವಿಚಕ್ರ ವಾಹನಗಳು ನಾಶವಾಗಿವೆ. ಹೀಗಾಗಿ ಗ್ರಾಮದ ಓಣಿ ರಸ್ತೆ ಮೇಲೆ ಮಕ್ಕಳು, ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ.ಸುಮಾರು ನಾಲ್ಕೆöದು…

Read More

ಬಸಿಡೋನಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಗೊರಬಾಳ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಸಿಡೋನಿ ಗ್ರಾಮದಲ್ಲಿ ರಸ್ತೆ ತುಂಬ ಗುಂಡಿಮಯ ಯಾಮಾರಿದರೆ ಯಮಲೋಕ ದರ್ಶನ ಗ್ಯಾರಂಟಿ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ರಸ್ತೆಯಲ್ಲೇ ನಿಲ್ಲುತ್ತಿದೆ. ರಸ್ತೆಗಳು ತೀವ್ರ…

Read More

ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊರಳಿಗೆ ಮತ್ತೊಂದು ಬೃಹತ್ ಭೂ ಹಗರಣದ ಕುಣಿಕೆ

RMV 2ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು BDA ಭೂ ಸ್ವಾಧೀನ ಪಡಿಸಿಕೊಂಡಿದ್ದ ಭೂಪಸಂದ್ರ ಗ್ರಾಮದ ಸರ್ವೆ ನಂ: 20 ಮತ್ತು 21 ರ 6.26 ಎಕರೆ ಸ್ವತ್ತನ್ನು De – notification ಮಾಡಿರುವ ಸಿದ್ಧರಾಮಯ್ಯ ಮತ್ತಿತರರ ವಿರುದ್ಧ ಪ್ರಕರಣ ದಾಖಲು. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಸ್ವಾರ್ಥಕ್ಕಾಗಿ ಕಾನೂನುಬಾಹಿರವಾಗಿ ₹ 400 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ BDA ಸ್ವತ್ತನ್ನು De-notification ಮಾಡಿರುವ ಸಿದ್ಧರಾಮಯ್ಯ 400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ BDA ಸ್ವತ್ತನ್ನು ಕಾನೂನಿನ…

Read More