BREAKING NEWS

ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮಹಾನಗರ ಪಾಲಿಕೆ, ಬೆಳಗಾವಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ವೀರಸೌಧದಲ್ಲಿ ಬುಧವಾರ ಜರುಗಿದ ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಕಾರ್ಯಕ್ರಮದಲ್ಲಿ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದುಕೊಂಡ ದಿನದಿಂದಲೂ ಸಹ ನಿರಂತರವಾಗಿ ಪ್ರತಿವರ್ಷ ನೆನೆದುಕೊಳ್ಳುವ ವ್ಯಕ್ತಿ ಎಂದರೆ ಅದುವೇ ರಾಷ್ಟ್ರಪಿತ…

Read More

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು.

ಬೆಂಗಳೂರು ವಿಧಾನಸೌಧ ಆವರಣದಲ್ಲಿ ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌…

Read More

87ನೇ ಅಖಿಲ ಭಾರತ ಕನ್ನಡ ಸಮ್ಮೇಳನದ ಕನ್ನಡದ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಸ್ವಾಗತಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ ಕನ್ನಡಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಅದ್ದೂರಿಯಿಂದ ಸ್ವಾಗತಿಸಿಪೂಜಾ ಕಾರ್ಯಕ್ರಮ ನೆರವೇರಿಸಿ ಮುಖ್ಯ ರಸ್ತೆಯ ಮೂಲಕವಾಗಿ ಕುಂಭ ಮೇಳ ಮೆರವಣಿಗೆಯೊಂದಿಗೆ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಸಾಗಿ ಬಿಳ್ಕೊಟ್ಟರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕು ಪಂಚಾಯತಿ ಇಒ ಪ್ರವೀಣಕುಮಾರ್ ಸಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ…

Read More

ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮ ಉದ್ದೇಶಿಸಿ ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ 4 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ ವಹಿಸಿ ಮಾತನಾಡಿ ಅವರು, ಗಾಂಧಿಜೀಯವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಕರೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿದ ಶಾಲೆಯ ಮುಖ್ಯೋಪಾಧ್ಯಾಯ ಎಂ.ಎಚ್. ಚಾಬುಕಸ್ವಾರ ಮಾತನಾಡಿ, ಗಾಂಧೀಜಿ ಇಡೀ ಜಗತ್ತಿಗೆ ಶಾಂತಿ ಮತ್ತು ಸಹೋದರತೆಯನ್ನು ಸಾರಿದರು. ಅವರ ಸ್ಮರಣೆಗಾಗಿ…

Read More

ಬುದ್ನಿ ಖುರ್ದ ಗ್ರಾಮದಲ್ಲಿ ನಡೆದ ಜಾನಪದ ಮತ್ತು ಸಂಗೀತ ಉತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬುದ್ನಿ ಖುರ್ದ ಗ್ರಾಮದ ಡಾ| ಬಿ.ಆರ್. ಅಂಬೇಡ್ಕರ್ ರಂಗ ಮಂದಿರದಲ್ಲಿ ಜಾನಪದ ಕಲಾ ಪರಿಷತ್ (ರಿ) ಹಲಗತ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡ ಜಾನಪದ ಮತ್ತು ಸಂಗೀತ ಉತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಕಲಾ ಪ್ರೇಮಿ ಶಂಕರ ಬಣಪ್ಪನವರ ಪಾಲ್ಗೊಂಡು ಮಾತನಾಡಿದರು.ಜಾನಪದ ಕಲೆ ತನ್ನದೇ ಆದ ಒಂದು ಇತಿಹಾಸ ಹೊಂದಿದೆ. ಹಳ್ಳಿಯ ಸೊಗಡಿನಲ್ಲಿ ಜಾನಪದ, ಭಜನಾ, ಸೋಬಾನ ಪದ, ರಿವಾಯತ್ ಪದ, ಸುಗಮ ಸಂಗೀತ…

Read More

ದೇಶದ ಪ್ರಗತಿಗೆ ಪ್ರವಾಸೋದ್ಯಮ ಪಾತ್ರ ದೊಡ್ಡದು : ಶಾಸಕ ಆಸೀಫ್ ಸೇಠ್

ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಕ್ಲಬ್ ಆವರಣದಲ್ಲಿ ಜರುಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆ -2024 ರ ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರವಾಸಿಗರು ವೈವಿಧ್ಯಮಯ ಪ್ರವಾಸಿ ತಾಣಗಳನ್ನು ವೀಕ್ಷಿಸಲು, ಅನ್ವೇಷಿಸಲು ಬರುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೋಟೆಗಳು, ಕೆರೆಗಳು, ಜಲಪಾತ ವಿವಿಧ ದೇವಸ್ಥಾನ ಸೇರಿದಂತೆ ಸಾಕಷ್ಟು ಪ್ರವಾಸಿ ತಾಣಗಳಿವೆ. ಉದ್ಯೋಗ ಸೃಜನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಚಾಲನಾ ಶಕ್ತಿಯಾಗಿ ಪ್ರವಾಸೋದ್ಯಮವು…

Read More

ರಾಮದುರ್ಗ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಗ್ರಾಮ ಪಂಚಾಯಿತಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.ಬೆಳೆ ಸಮೀಕ್ಷೆ, ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್, ವೋಟರ್ ಹೆಲ್ತ್‌ಲೈನ್, ಪೌತಿ ಆಂದೋಲನ ಆ್ಯಪ್, ಸಿ-ವಿಜಿಲ್ ಆ್ಯಪ್, ಇ-ಆಫೀಸ್, ಹಕ್ಕುಪತ್ರ, ಆಧಾರ್ ಸೀಡ್, ಸಂಯೋಜನೆ, ಲ್ಯಾಂಡ್ ಬಿಟ್ , ನಮೂನೆ 1-5ರ ವೆಬ್ ಅಪ್ಲಿಕೇಶನ್, ಸಂರಕ್ಷಣೆ, ನವೋದಯ, ಗರುಡ ಆಪ್, ಭೂಮಿ, ಬೆಳೆ ಸಮೀಕ್ಷೆಯ ಅನುಮೋದನೆ…

Read More

ಜಿಲ್ಲಾ ಮಟ್ಟದ ರಾಷ್ಟ್ರೀಯ ಪೋಷನ ಮಾಸಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಉದ್ಘಾಟಿಸಿದರು.

ದಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಪೋಷನ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಪ್ಲಾಸ್ಟಿಕ್ ವಸ್ತುಗಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೆಚ್ಚಿನ ಜನರು ರಾಸಾಯನಿಕ ಬಳಸಿದ ಆಹಾರವನ್ನು ಸೇವಿಸುವುದರಿಂದ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಆಹಾರವನ್ನು ಸೇವಿಸಬಾರದು…

Read More

ಮಳೆಯಿಂದ ಮನೆ ಕುಸಿದು ಗಂಭೀರ ಗಾಯ ಸ್ಥಳಕ್ಕೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ್ ಭೇಟಿ ನೀಡಿದರು

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ವಾರ್ಡ್ ನಂಬರ್ 22 ರ ರಾಮಪೂರಸೈಟದ ವ್ಯಾಪ್ತಿಯ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳವಾರ ಮಧ್ಯರಾತ್ರಿ ಮನೆ ಕುಸಿದಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆಯಲ್ಲಿದ್ದ ಯಲ್ಲವ್ವ ನಾಗಪ್ಪ ಯಮನೂರ,( 60 ) ಅವರನ್ನು ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನಂತರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ್ ಭೇಟಿ ನೀಡಿ ಸರ್ಕಾರದಿಂದ ಹಾನಿಗೊಳಗಾದ ಮನೆಗೆ ಶೀಘ್ರ…

Read More

ಖಾನಪೇಠ ಧನಲಕ್ಷ್ಮಿ ಸಹಕಾರಿ ಸಕ್ಕರೆಕಾರ್ಖಾನೆಯ ಆವರಣದಲ್ಲಿ ನಡೆದ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಣ್ಣ ಯಾದವಾಡ ಉದ್ಘಾಟಿಸಿದರು.

ಕಳೆದ 15 ವರ್ಷಗಳಿಂದ ಕಾರ್ಖಾನೆಯ ಆಗು ಹೋಗುಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿಭಾಯಿಸಿ ಪ್ರಗತಿಯತ್ತ ಕೊಂಡೈದು ರೈತಪರವಾಗಿ ಶ್ರಮಿಸಲಾಗಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಮಂಗಳವಾರ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಣ್ಣ ಯಾದವಾಡ ಉದ್ಘಾಟಿಸಿ ಮಾತನಾಡಿದ ಅವರು, ಶೇರು ಸದಸ್ಯರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 12 ವರ್ಷಗಳಿಂದ ರಿಯಾಯತಿ ದರದಲ್ಲಿ ಸಕ್ಕರೆ ವಿತರಣೆ ಮಾಡುತ್ತಿದ್ದೇವೆ….

Read More