ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ.
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮಹಾನಗರ ಪಾಲಿಕೆ, ಬೆಳಗಾವಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ವೀರಸೌಧದಲ್ಲಿ ಬುಧವಾರ ಜರುಗಿದ ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಕಾರ್ಯಕ್ರಮದಲ್ಲಿ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದುಕೊಂಡ ದಿನದಿಂದಲೂ ಸಹ ನಿರಂತರವಾಗಿ ಪ್ರತಿವರ್ಷ ನೆನೆದುಕೊಳ್ಳುವ ವ್ಯಕ್ತಿ ಎಂದರೆ ಅದುವೇ ರಾಷ್ಟ್ರಪಿತ…
