BREAKING NEWS

ಬೆಟಗೇರಿ ಪಿಕೆಪಿಎಸ್‌ಗೆ ೧೫.೦೬ಲಕ್ಷ ರೂಪಾಯಿ ಲಾಭ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್೨೦೨೩-೨೪ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.೨೩ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು.ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್೨೦೨೩-೨೪ನೇ ಸಾಲಿನಲ್ಲಿ ಸಂಘವು ಒಟ್ಟು ೧೫.೦೬.೭೭೯ ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ೫ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು.ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೋಮಗೌಡ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಶೇರ ಸದಸ್ಯರು, ಗ್ರಾಹಕರು,…

Read More

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಮೂಲ ಭೂತ ಸೌಕರ್ಯ ಗಳನ್ನು ಒದಗಿಸುವಂತೆ ಮಾನ್ಯ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಮೂಲ ಭೂತ ಸೌಕರ್ಯಗಳಾದ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ , ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ…

Read More

ಪಿ.ಎಂ. ಪಾಲರೇಶಾ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಚಾಲನೆ ನೀಡಿದ ಗಣ್ಯರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಲಯನ್ಸ್ ಸಂಸ್ಥೆಯ ಹಾಗೂ ಹುಬ್ಬಳ್ಳಿಯ ಡಾ| ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ಸಾರ್ವಜನಿಕ ಆಸ್ಪತ್ರೆ ಮತ್ತು ಬೆಳಗಾವಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಇವುಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಪಟ್ಟಣದ ಪಿ.ಎಂ. ಪಾಲರೇಶಾ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಜರುಗಿತು.ಡಾ| ಎಂ.ಎಂ. ಜೋಶಿ ಆಸ್ಪತ್ರೆಯ ಶಿಬಿರ ಸಂಯೋಜಕ ವಾದಿರಾಜ ಕಟ್ಟಿ ಅವರು ಮಾತನಾಡಿ, ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ಬಡವರಿಗೆ ಬಹಳ ಸಹಾಯಕಾರಿ ಯಾಗಿದ್ದು ಎಲ್ಲರೂ…

Read More

ಪಟ್ಟಣದ ಅಂಚೆ ಸಿಬ್ಬಂದಿಗಳು ಪ್ರಭಾತಪೇರಿ ನಡೆಸಿ ಜನರಲ್ಲಿ ಶುದ್ಧೀಕರಣ ಹಾಗೂ ನೈರ್ಮಲ್ಯದ ಅರಿವು ಮೂಡಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಸ್ವಚ್ಛತೆಯೇ ಸೇವೆ ಅಂಚೆ ಸಪ್ತಾಹ ಅಂಗವಾಗಿ ರಾಮದುರ್ಗ ಪ್ರಧಾನ ಅಂಚೆ ಕಚೇರಿ ಸಿಬ್ಬಂದಿ ಪ್ರಧಾನ ಅಂಚೆ ಕಚೇರಿಯಿಂದ ಪ್ರಭಾತ ಪೇರಿಯೊಂದಿಗೆ ಪಟ್ಟಣದ ವಿವಿಧ ಮಾರ್ಗವಾಗಿ ಸ್ವಚ್ಛ ಭಾರತ ಅಭಿಯಾನ ಬ್ಯಾನರ ಹಿಡಿದು ಜನರಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯದ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾದರು.ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆ ಅಡಿಯಲ್ಲಿ ಹಸಿರೇ ಉಸಿರು, ಸ್ವಚ್ಛ ಭಾರತ ಆರೋಗ್ಯಕರ ಭಾರತ, ಸ್ವಚ್ಛ ಭಾರತ ಹಸಿರು ಭಾರತ, ಸ್ವಚ್ಛ ಮತ್ತು ಹಸಿರು ಭಾರತದ ಪರಿಪೂರ್ಣ ಕನಸು,…

Read More

ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವಿದ್ಯಾ ಚೇತನ ಶಾಲೆಯಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ ರಾಮದುರ್ಗ ಒಂದನೇ ವಲಯದ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷ ಶಂಕ್ರಪ್ಪ ಬೆನ್ನೂರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಆರ್ ಮಂಜುಳಾ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ ತಿಂಗಳಲ್ಲಿ ಪೋಷಣ ಮಾಸ ಆಚರಣೆ ಮಾಡುತ್ತಿದ್ದು ಗರ್ಭಿಣಿಯವರಿಗೆ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಜಾಗೃತಿ ಮೂಡಿಸಿದರು. ಆರೋಗ್ಯ…

Read More

ಡ್ರಗ್ಸ್ ಪಾಜಿಟಿವ್ ಪ್ರಕರಣಗಳ ಪಾಲೊಅಪ್ ಮಾಡಿ; ಪಾಲಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡ್ರಗ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮಗಳ ಕುರಿತು ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು. ಅವಳಿ ನಗರದಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟದ ಕುರಿತು ತಪಾಸಣೆ, ವಿಚಾರಣೆ ಕೈಗೊಂಡ ಬಗ್ಗೆ ಸಮಿತಿಗೆ ವರದಿ ಸಲ್ಲಿಸಬೇಕು. 354 ಯುವಕರ ಪೈಕಿ 168 ಜನ ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ಪಾಜಿಟಿವ್ ಬಂದಿರುವುದು ಸಾಮಾನ್ಯ ಸಂಗತಿಯಲ್ಲ. ಡ್ರಗ್ಸ್ ಹಾನಿ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಮಾಡುವ…

Read More

ತ್ರೈಮಾಸಿಕ ಜಿಲ್ಲಾ‌‌ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಸಂಸದ ಜಗದೀಶ ಶೆಟ್ಟರ್ ಮಾತನಾಡಿದರು

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ‌‌ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಜಗದೀಶ ಶೆಟ್ಟರ್ ಅವರು ವಹಿಸಿ ಮಾತನಾಡಿದರು. ಬೆಳೆ ಪರಿಹಾರ ಕಾರ್ಯದಲ್ಲಿ ಜಂಟಿ‌ ಸಮೀಕ್ಷೆ‌ ಕಾರ್ಯವನ್ನು ಪೂರ್ಣಗೊಳಿಸಿ ಆದಷ್ಟು ಬೇಗನೆ‌ ರೈತರಿಗೆ ಬೆಳೆ ಪರಿಹಾರ ಒದಗಿಸಲು ಕ್ರಮ‌ ಜರುಗಿಸಿ, ನೆರೆ‌ ಹಾವಳಿಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆಗಳ ದುರಸ್ತಿ‌ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ‌ ಹೇಳಿದರು. ಬೆಂಬಲ‌ ಬೆಳೆ ಖರೀದಿ ಕೇಂದ್ರಗಳಲ್ಲಿ…

Read More

ಕಬ್ಬಡಿ ಮತ್ತು ಥ್ರೋಬಾಲ ಕ್ರೀಡಾಕೂಟವನ್ನು ಅನಿಕೇತ ಪಟ್ಟಣ ಅವರು ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದ ಶ್ರೀ ಫಲಹಾರ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಸಂಯುಂಕ್ತಾಶ್ರಯದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಪದವಿಪೂರ್ವ ಮಹಾವಿದ್ಯಾಲಯಗಳ ಕಬ್ಬಡಿ ಮತ್ತು ಥ್ರೋಬಾಲ ಕ್ರೀಡಾಕೂಟವನ್ನು ಅನಿಕೇತ ಪಟ್ಟಣ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಪೂಜ್ಯರಾದ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಆರ್.ಟಿ ಬಳಿಗಾರ, ಶ್ರೀ ರಮೇಶ ಕಂಬಾರ, ಶ್ರೀ ಚಿನ್ನಪ್ಪ ಮುದೇನೂರ  ಎಸ್.ಎಸ್ ಬೂದಿಹಾಳಮಠ ಹಾಗೂ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ರಾಜ್ಯ ಕ್ರಿಕೆಟ್ ತಂಡಕ್ಕೆ ಶ್ರೇಯಾ ಚವ್ಹಾಣ ಆಯ್ಕೆ.

ವಿಜಯಪೂರ : 19 ವಯಸ್ಸಿನ ಕರ್ನಾಟಕ ರಾಜ್ಯ ಮಹಿಳಾ ಟಿ-20 ಹಾಗೂ ಏಕದಿನ ಸರಣಿಗೆ ವಿಜಯಪೂರ ನಗರದ ಪ್ರತಿಷ್ಟಿತ ಎಸ್.ಜೆ.ಬಿ. ಪಿ.ಯು. ಕಾಲೇಜಿನಲ್ಲಿ ಪ್ರಥಮ ಪಿ.ಯು. ವಿಜ್ಞಾನವಿಭಾಗದಲ್ಲಿ ಓದುತ್ತಿರುವ ಶ್ರೇಯಾ ಚವ್ಹಾಣ ಆಯ್ಕೆಯಾಗಿದ್ದಾರೆ. ಅಕ್ಟೋಬರ್-1 ರಿಂದ ಚೆನೈಯಲ್ಲಿ ನಡೆಯಲಿರುವ ರಾಜ್ಯ ಮಹಿಳಾ ಅಂಡರ-19 ತಂಡದಲ್ಲಿಆಡಲಿದ್ದಾರೆ. ತಂಡವು ಗುಜರಾತ, ಬರೋಡಾ, ಛತ್ತಿಸಗಡ, ಮಿಜೊರಾಮ ಹಾಗೂ ಮಹಾರಾಷ್ಟ್ರ ತಂಡದಜೋತೆಗೆ ಏಕದಿನ ಶ್ರೇಣಿ ಪಂದ್ಯಗಳನ್ನು ಜನೇವರಿ 2025 ರಲ್ಲಿ ಅಸ್ಲಾಂ, ಮಿಜೊರಾಮ ಮತ್ತು ಛತ್ತಿಸಗಡರಾಜ್ಯಗಳ ತಂಡಗಳೊಂದಿಗೆ ಸೆಣೆಸಲಿದ್ದಾರೆ. ಕಳೆದ ವರ್ಷ ರಾಜಕೋಟನಲ್ಲಿ…

Read More

ರಾಮದುರ್ಗ ಪಟ್ಟಣದಲ್ಲಿ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಸಂಭ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ 16_9_24ರಂದು ನಡೆಯಬೇಕಿದ್ದ್ ಈದ ಮಿಲಾದ್ ಮೆರವಣಿಗೆ 19_9_24ರಂದು ನಡೆಯಿತು, ಕಾರಣ 16-9-24ರಂದು ಗಣೇಶ ಹಬ್ಬದ ನಿಮತ್ಯ ಇಂದು ಮೆರವಣಿಗೆ ನಡೆಯಿತು. ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನದ ಸಂಕೇತವಾಗಿರುವ ಈದ್‌ಮಿಲಾದ್ ಹಬ್ಬವನ್ನು ಪಟ್ಟಣದ ಜಾಮಿಯಾ ಮಸ್ಜಿದಯಿಂದ ಮುಂಜಾನೆ 10ಘಂಟೆಯಿಂದ ಸಂಜೆ 4ಘಂಟೆಗೆ ಮೆರವಣಿಗೆ ನಡೆಯಿತು. ಮುಸ್ಲಿಂ ಬಾಂದವರು ನಗರದ ಪ್ರಮುಖ ಬೀದಿಗಳಲಿ ಮೆರವಣಿಗೆ ಸಾಗಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಬಿಳಿಬಣ್ಣದ ಕುರ್ತಾ ಧರಿಸಿ,…

Read More