ಜನರು ಮತ್ತು ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್
ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಗಂಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಗಸ್ಟ್ ನಲ್ಲಿ ಮಳೆಯ…
