ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಕುಣಿಗಲ್ ತಾಲೂಕಿ ನಾದ್ಯಂತ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಸರ್ಕಾರಿ ಒಡೆತನದ ಕೆರೆ, ಕಟ್ಟೆ, ಹಳ್ಳಕೊಳ್ಳ ಹಾಗೂ ‘ಬಿ’ ಕರಾಬು ಜಮೀನುಗಳನ್ನು ಭೂಗಳ್ಳರಿಂದ ತಕ್ಷಣವೇ ವಶಪಡಿಸಿ ಕೊಳ್ಳಬೇಕೆಂದು ಆಗ್ರಹಿಸಿ ‘ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ’ಯಿಂದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಹೊರಟ ನೂರಾರು ಹೋರಾಟಗಾರರು. ತಾಲೂಕು ಹಾಗೂ ಜಿಲ್ಲಾ ಆಡಳಿತದ ನಿರ್ಲಕ್ಷ್ಯ ಧೋರಣೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸಿಲ್ದಾರ್…
