ಕರ್ತವ್ಯ ಲೋಪ ಆರೋಪ : ಗುಡೇನಕಟ್ಟಿ ಪಿಡಿಓ ಅಮಾನತಿಗೆ ಸಚಿವ ಸಂತೋಷ ಲಾಡ್ ಸೂಚನೆ, ಜಿಲ್ಲಾ ಪಂಚಾಯತ ಸಿಇಓ ರಿಂದ ಅಮಾನತು ಆದೇಶ
ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ ಹಿನ್ನೆಲೆಯಲ್ಲಿ ಗುಡೇನಕಟ್ಟಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಡಿ.ಎಂ.ಕಾಲವಾಡ ಅವರನ್ನು ಅಮಾನತುಗೊಳಿಸಲಾಗಿದೆ. ಅವಳಿ ಮಕ್ಕಳ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಅವರು ಇಂದು ಕುಂದಗೋಳ ತಾಲೂಕಿನ ಯರಿನಾರಾಯನಪುರ ಗ್ರಾಮಕ್ಕೆ ಭೇಟಿ ನೀಡಿದ್ದರು. ಸಾರ್ವಜನಿಕರ ಸುರಕ್ಷತೆಗೆ ಸರಿಯಾದ ಕ್ರಮಕೈಗೊಳ್ಳದ ಮತ್ತು ಗ್ರಾಮದ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸದೆ ಕರ್ತವ್ಯ ಲೋಪ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಪಿ.ಡಿ.ಒ ರನ್ನತಕ್ಷಣವೇ ಅಮಾನತುಗೊಳಿಸಲು ಆದೇಶಿಸಿದ್ದರು. ದಿಂದ ಜಾರಿಗೆ…
