BREAKING NEWS

50 ಲಕ್ಷ ರೂ.ಹಣಕ್ಕೆ ಬ್ಲಾಕ್ ಮೇಲ್ : ಬೆಸ್ಕಾಂ ಲೈನ್‌ಮೆನ್ ಸೇರಿ ಮೂವರ ವಿರುದ್ಧ ಎಫ್‌ಐಆರ್

ನೆಲಮಂಗಲ ಬೆಂಗಳೂರು ಹೊರವಲಯ ನೆಲಮಂಗಲ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯ ಸೊಂಡೆಕೊಪ್ಪ ಶಾಖೆಯ ಲೈನ್ ಮೆನ್ಒಬ್ಬಖಾಸಗಿ ಯೂಟ್ಯೂಬರ್ ಜೊತೆ ಸೇರಿ ತನ್ನ ಹಿರಿಯ ಅಧಿಕಾರಿ ಸಹಾಯಕ ಇಂಜಿನಿಯರ್ ಬಳಿ 50 ಲಕ್ಷ ರೂ.ಹಣಕ್ಕೆ ಬ್ಲಾಕ್ ಮೇಲ್ಮಾಡಿರುವ ಆರೋಪ ಕೇಳಿಬಂದಿದೆ.ಬ್ಲಾಕ್ ಮೇಲ್‌ಗೆ ನೊಂದ ಸೊಂಡೆಕೊಪ್ಪ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯ‌ ನಾಗರಾಜ್ ನೆಲಮಂಗಲ ಪೊಲೀಸ್ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಸ್ಕಾಂನಲ್ಲಿ ನಾಗರಾಜ್ ಅವ್ಯವಹಾರ ಮಾಡುತಿದ್ದಾರೆ ಎಂದು ಸುಖಾ ಸುಮ್ಮನೆ ಅರ್ಜಿಗಳನ್ನು ಹಾಕಿ ಹೆದರಿಸಲು ಪ್ರಯತ್ನಿಸಿದ ಅಲ್ಲಿನ ಲೈನ್ ಮೆನ್ ಹರೀಶ್ ಸೇರಿದಂತೆ…

Read More

ಬಳ್ಳಾರಿ ಕಾನಿಪ ಧ್ವನಿ ಸಂಘಟನೆ ಜಿಲ್ಲಾಧ್ಯಕ್ಷರಾಗಿ ಗಿರಿ ಯಾದವ್ ಆಯ್ಕೆ : ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದಲ್ಲಿ

ಬಳ್ಳಾರಿ,ಆ.30: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯದ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಇಂದು ನಡೆದ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎರಡನೇ ಬಾರಿಗೆ ಬಳ್ಳಾರಿ ಜಿಲ್ಲಾಧ್ಯಕ್ಷರನ್ನಾಗಿ ಗಿರಿ ಯಾದವ್ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ. ಜಿಲ್ಲಾ ಗೌರವ ಅಧ್ಯಕ್ಷರನ್ನಾಗಿ ಟಿ ದುರ್ಗಪ್ಪ, ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಗಿರಿ ಯಾದವ್, ಉಪಾಧ್ಯಕ್ಷರಾಗಿ ಭೀಮಣ್ಣ, ಕಂಪ್ಲಿ ಚಂದ್ರಪ್ಪ, ಜಿಲ್ಲಾ ಪ್ರಧಾನ…

Read More

ಗಣೇಶ ಹಬ್ಬ ಸ್ನೇಹ, ಸೌಹಾರ್ದತೆಯ ಪ್ರತೀಕವಾಗಿದೆ: ಡಿವೈಎಸ್‌ಪಿ ಡಿ.ಎಚ್.ಮುಲ್ಲಾ

ಬೆಟಗೇರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಒಂದೇ ತಿಂಗಳಲ್ಲಿ ಬಂದಿರುವದರಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬವನ್ನು ಸ್ಥಳೀಯ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ಹಬ್ಬ ಸ್ನೇಹ, ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಗೋಕಾಕ ಡಿವೈಎಸ್‌ಪಿ ಡಿ.ಎಚ್.ಮುಲ್ಲಾ ಹೇಳಿದರು.ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಆ.30 ರಂದು ನಡೆದ…

Read More

ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು: ಪಿಎಸ್‌ಐ ಬಿ.ಆನಂದ

ಬೆಟಗೇರಿ ಗ್ರಾಮದ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‌ಐ ಬಿ. ಆನಂದ ಹೇಳಿದರು.ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.30 ರಂದು ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದರು.ಗಣೇಶ ಹಬ್ಬವನ್ನು ಸ್ಥಳೀಯರು ದುಂದು ವೆಚ್ಚ ಮಾಡಿ ಆಚರಿಸುವ ಬದಲು ಸಂಕಷ್ಟದಲ್ಲಿರುವ ಬಡವರಿಗೆ, ಅನಾಥಾಶ್ರಮದ ಮಕ್ಕಳಿಗೆ ಸಹಾಯ ಮಾಡಲು ಮುಂದಾಗಬೇಕು….

Read More

ಯುವಕನ ಕೊಲೆಯನ್ನು ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಕೊಲೆ ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಕೊಲೆಯಾದವನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕೆಂದು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಸಿಪಿಐ(ಎಂ)ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ್…

Read More

ಜಿಲ್ಲಾ‌ಮಟ್ಟದ ರಸ್ತೆ ಸುರಕ್ಷಾ ಸಮಿತಿ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ‌ಮಟ್ಟದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ದೇಶದಾದ್ಯಂತ ಅಪಘಾತ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರಂತರ ನಿಗಾ ವಹಿಸಿರುತ್ತದೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವುದರ ಜತೆಗೆ ತಮಗೆ ನಿಗದಿಪಡಿಸಿದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು. ಯಮನಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ, ನಗರದ ಗೋಗಟೆ ವೃತ್ತ ಹಾಗೂ ಕಾಲೇಜು ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ….

Read More

ಪ್ರಾಸಿಕ್ಯೂಷನ್‌ ಪಾಲಿಟಿಕ್ಸ್!

ಬೆಂಗಳೂರು: ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮಕ್ಕೆ ಪ್ರತಿಯಾಗಿ ರಾಜ್ಯಪಾಲರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ರಾಜಕೀಯ ಹೋರಾಟವನ್ನು ಸರಕಾರ ತೀವ್ರಗೊಳಿಸಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಬಾಕಿ ಇರುವ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ತಾಕೀತು ಮಾಡುವ ತೀರ್ಮಾನವನ್ನು ಸಂಪುಟ ಸಭೆ ಗುರುವಾರ ಕೈಗೊಂಡಿದೆ. ಆ ಮೂಲಕ, ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಕಾಂಗ್ರೆಸ್…

Read More

ಇನ್ಮುಂದೆ ಲೈಸೆನ್ಸ್ ಇಲ್ಲದೇ ಸಿಗರೇಟ್, ಗುಟ್ಕ ಮಾರಾಟ ಮಾಡೋಹಾಗಿಲ್ಲ. ಬಿಬಿಎಂಪಿ ಖಡಕ್ ವಾರ್ನಿಂಗ್!

ಬೆಂಗಳೂರು: ಆಧುನಿಕ ಯುಗದಲ್ಲಿ ಯುವ ಜನತೆ ತಂಬಾಕು ಉತ್ಪನ್ನಗಳ ಸೇವಿಸಿ ಹಾದಿತಪ್ಪುತ್ತಿರುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇರುವ ಸಣ್ಣ ಪ್ರಮಾಣದ ವ್ಯಾಪಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ನಗರದಲ್ಲಿ ಇರುವ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಪುಟ್ಟ ಗೂಡಂಗಡಿ ವ್ಯಾಪಾರಿಗಳಿಗೆ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದ್ದು, ಸಿಗರೇಟ್, ಗುಟ್ಕಾ ಮಾರಾಟ ಅಂಗಡಿಗಳಿಗೆ ಪ್ರತ್ಯೇಕ ಲೈಸೆನ್ಸ್ ಜಾರಿ ಮಾಡಲು ಪಾಲಿಕೆ ಮುಂದಾಗಿದೆ. ಇನ್ನು ಮುಂದಿನ ದಿನಗಳಲ್ಲಿ ತಂಬಾಕು ಉತ್ಪನ್ನ ಮಾರಾಟ…

Read More

ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ರ್ಅವರಿಗೆ ಸನ್ಮಾನ ಸಮಾರಂಭ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಆರಿಬೆಂಚಿ ಸಭಾಭವನದಲ್ಲಿ ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದ ಹಾಗೂಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಅವರಿಗೆ ಸನ್ಮಾನ ಸಮಾರಂಭ ನಡೆಯಿತು.ಪ್ರತಿಭಾ ಪುರಸ್ಕಾರ ಸಮಾರಂಭಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ ನೆರವೇರಿಸಿ ದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ತಾಲೂಕಘಟಕದ ಅಧ್ಯಕ್ಷರಾದ ಜಿಎನ್ ಮುತ್ತೂರುಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿಮಾಜಿ ಶಾಸಕ…

Read More

ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿಯನ್ನು ವಿರೋಧಿಸಿ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಾರ್ವಜನಿಕರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ರಾಮದುರ್ಗ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಸಮಾವೇಶಗೊಂರು.ಪ್ರತಿಭಟನಾಕಾರನ್ನು ಉದ್ದೇಶಿಸಿ ವಿಧಾನಸಭೆ…

Read More