ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು
ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು ನಮೂನೆ-3 ವಿತರಿಸಿರುವ ಕುರಿತು ಹಲವಾರು ಗಂಭೀರ ದೂರುಗಳು ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಮೈಸೂರು ಜಿಲ್ಲಾಧಿಕಾರಿಗಳು ದಿನಾಂಕ-03.01.2026ರಂದು ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು (ಕಂದಾಯ) ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, 15 ದಿನಗಳೊಳಗೆ…
