ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ
ಸವದತ್ತಿ ತಾಲೂಕಿನ ಮುರಗೋಡ ಶ್ರೀ ಮಹಾಂತ ದುರದುಂಡೇಶ್ವರ ಶ್ರೀ ಮಠದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ ಜರುಗಿತು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ನೀಲಕಂಠ ಮಹಾಸ್ವಾಮಿಗಳು ಮಾತನಾಡಿ ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ಮನ್ ನಿರಂಜನ…
ಕರ್ನಾಟಕ ರಕ್ಷಣಾ ವೇದಿಕೆ ಸವದತ್ತಿ ತಾಲೂಕ ಘಟಕದ ವತಿಯಿಂದ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ವಿತರಿಸಲಾಯಿತು
ಸವದತ್ತಿ ತಾಲೂಕಿನ ಮುರಗೋಡ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷಾರಾದ ಸಮರ ಸಿಂಹ ಟ. ಏ ನಾರಾಯಣಗೌಡ್ರ ೬೦ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸವದತ್ತಿ ತಾಲೂಕ ಘಟಕದ ವತಿಯಿಂದ ಹಾಗೂ ಮಹಾಂತ ಮುರಗೋಡ ಘಟಕದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಭವನದಲ್ಲಿ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ಮತ್ತು ಬಿಸ್ಕೆಟ್ ವಿತರಿಸಲಾಯಿತು ನಂತರ ಸ್ಥಳೀಯ ಸಮುದಾಯ ಆರೋಗ್ಯ ಭವನದ ಅಂಗಳದಲ್ಲಿ ಸಸಿ ನೆಡುವ ಮೂಲಕ ರಾಜ್ಯಾಧ್ಯಕ್ಷರಾದ ಟಿ ಏ ನಾರಾಯಣಗೌಡರ…
“ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮತ್ತು ವಲಯ ಅರಣ್ಯಾಧಿಕಾರಿಗಳ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 05-06-2026 ರಂದು ಸರ್ಕಾರಿ ಶಾಸಕರ ಮಾದರಿ ಶಾಲೆ ಗುರ್ಲಹೊಸೂರ, ಸವದತ್ತಿಯಲ್ಲಿ “ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ರಾಮ.ಟಿ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟನೆ ನೆರವೇರಿಸಿದರು. ನಂತರ…
ನಡುರಸ್ತೆಯಲ್ಲಿ ಹಡೆದವ್ವನ ಬಿಟ್ಟಿದ್ದ ಮಗ : ಕೊನೆಗೂ ಮನೆ ಸೇರಿದ ವೃದ್ಧ ತಾಯಿ.
ಬೆಳಗಾವಿ ಹೆತ್ತ ತಾಯಿಯನ್ನು ನಡು ರಸ್ತೆಯಲ್ಲಿ ಬಿಟ್ಟು ಮಗ ಪರಾರಿಯಾದ ಘಟನೆ ಬೆನ್ನಲ್ಲೇ ಕೊನೆಗೂ ಹಡೆದವ್ವನನ್ನು ಮರಳಿ ಮನೆಗೆ ಕರೆದೊಯ್ಯುವ ಮೂಲಕ ಮಗ ಮಾಡಿದ ತಪ್ಪಿಗೆ ನೋವುಂಡ ಘಟನೆ ನಡೆದಿದೆ. ಹೌದು ಕಳೆದ ಮೂರು ದಿನಗಳ ಹಿಂದೆ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ಹೆತ್ತ ತಸಯಿಯನ್ನು ಬಿಟ್ಟು ಮಗ ಪರಾರಿಯಾಗಿದ್ದ. ಅಲ್ಲೇ ಒಂದು ರಾತ್ರಿ ಕಳೆದ ತಾಯಿ ಮರುದಿನ ಬೆಳಿಗ್ಗೆ ಮಗನ ಕ್ರೌರ್ಯ ಬಿಚ್ಚಿಟ್ಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವ್ಯಕ್ತಿಯ ಕಾರ್ಯಕ್ಕೆ…
ಶಾಸಕ ಜಿ. ಎಸ್. ಪಾಟೀಲ್ಗೆ ಸಚಿವ ಸ್ಥಾನಕ್ಕಾಗಿ ನಿಡಗುಂದಿಯಲ್ಲಿ ವಿಶಿಷ್ಟ ಹರಕೆ: ಸುಡುಬಿಸಿಲಿನಲ್ಲಿ ‘ದಿಡ ನಮಸ್ಕಾರ’ ಹಾಕಿದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ದರ್ಶನ ಡುಮ್ಮಣ್ಣವರ
ಗದಗ ಜಿಲ್ಲೆ ರೋಣ ಮತಕ್ಷೇತ್ರದ ಜನಪ್ರಿಯ ಹಾಗೂ ಹಿರಿಯ ಶಾಸಕರಾದ ಜಿ. ಎಸ್. ಪಾಟೀಲ್ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿ, ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ದರ್ಶನ ವೀರಬಸಪ್ಪ ಡುಮ್ಮಣ್ಣವರ ಅವರು ಗ್ರಾಮದಲ್ಲಿ ಸುಡುಬಿಸಿಲನ್ನೂ ಲೆಕ್ಕಿಸದೆ ದಿಡ ನಮಸ್ಕಾರ (ದಂಡ ನಮಸ್ಕಾರ) ಹಾಕುವ ಮೂಲಕ ವಿಶಿಷ್ಟ ಹರಕೆ ಸಲ್ಲಿಸಿದರು. ಗ್ರಾಮದ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರ ದೇವಸ್ಥಾನದಿಂದ ಭೀಮಾಂಬಿಕ ದೇವಸ್ಥಾನದ ವರೆಗೆ ಮಂಗಲ ವಾದ್ಯಗಳು, ಡೊಳ್ಳು…
ರಾಣಿ ಅಹಲ್ಯಾಬಾಯಿ ಹೋಳ್ಕರ್ ಇವರ 301ನೇ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ
ಬೆಳಗಾವಿ: ಪಾಲಕರ ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ತಮ್ಮ ಹಾಗೂ ಪಾಲಕರ ಕನಸು ನನಸು ಮಾಡಲು ಶ್ರಮವಹಿಸಿ ಅಧ್ಯಯನ ಕೈಗೊಂಡು ಯಶ್ವಸಿಯಾಗ ಬೇಕೆಂದು ಉಪನ್ಯಾಸಕಿ ಶ್ರೀಮತಿ ಮೈತ್ರಾಯಿಣಿ ಗದಿಗೆಪ್ಪಗೌಡರ ಹೇಳಿದರು.ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ ಸಂಜೆಕನಕ ಶ್ರೀ ಮಹಿಳಾ ಬಳಗ ಹಾಗೂ ಬೆಳಗಾವಿ ಸಮಸ್ತಕುರುಬರ ಸಂಘಗಳ ವತಿಯಿಂದರಾಷ್ಟ್ರಮಾತೆ ಅಹಲ್ಯಾಬಾಯಿ ಹೋಳ್ಕರ್ ಇವರ 301ನೇ ಜಯಂತಿ ಹಾಗೂ 10 ನೇ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆಪ್ರತಿಭಾ ಪುರಸ್ಕಾರ ಜರುಗಿತು.ಅಹಲ್ಯಾಬಾಯಿ ಹೊಳ್ಳರ್ ಅವರು ಮಧ್ಯ ಭಾರತದ…
ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರು : ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸ-ರಿನಲ್ಲಿ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ವಿಶೇಷವಾಗಿ ಪೂರ್ವಾಭಿಮುಖವಾಗಿ ಸಿದ್ದಪಡಿಸಲಾದ ವೇದಿಕೆಯಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳಿಗೆ ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಾಗಿ ಡಾ. ಜಿ.ಪರಮೇಶ್ವರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ…
25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಾಮರಾಜನಗರ ನಗರಸಭೆಯ ಕಚೇರಿಯಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾ.ನಗರ ನಗರಸಭೆಯ ಕಂದಾಯ ನಿರೀಕ್ಷಕ ಶಕೀಲ್ ಅಹಮದ್, ಕಂದಾಯ ಅಧಿಕಾರಿ ಹೇಮಕುಮಾರ್ ನಿವೇಶನವನ್ನು ಇ ಖಾತೆ ಮಾಡಿಕೊಡಲು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ಪಡೆದುಕೊಳ್ಳುವಾಗ ನೇರವಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಇ ಖಾತೆ ಮಾಡಿಕೊಡಲು ಅಧಿಕಾರಿಗಳಿಗೆ ಮಧ್ಯವರ್ತಿಯಾಗಿದ್ದ…
ಮುನವಳ್ಳಿಯಲ್ಲಿ ಬಿಟ್ಟು ಹೋದ ವೃದ್ಧೆಯ ರಕ್ಷಣೆಗೆ ಖಡಕ್ ಸೂಚನೆ!
ಬೆಳಗಾವಿ ಜಿಲ್ಲೆಯ ಮುನವಳ್ಳಿಯಲ್ಲಿ ವೃದ್ಧೆಯೊಬ್ಬರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟುಹೋದ ಅಮಾನವೀಯ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ತಕ್ಷಣವೇ ಸ್ಪಂದಿಸಿರುವ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ವೃದ್ಧೆಗೆ ಸೂಕ್ತ ಚಿಕಿತ್ಸೆ ಹಾಗೂ ರಕ್ಷಣೆ ನೀಡುವಂತೆ ಖಡಕ್ ನಿರ್ದೇಶನ ನೀಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಮಹಿಳೆಯನ್ನು ನಿರ್ಜನ ಪ್ರದೇಶದಲ್ಲಿ ಕೈಬಿಟ್ಟಿರುವ ಘಟನೆ ತೀವ್ರ ಕಳವಳ ಮೂಡಿಸಿದೆ. ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಮತ್ತು ಮಕ್ಕಳ…
ಪಾಲಕರು ತಮ್ಮ ಮಕ್ಕಳನ್ನು ಶಾಲೆಯ ಪ್ರಾರಂಭದ ದಿನದಿಂದ ಶಾಲೆಗೆ ಕಳುಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಲು ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಕರೆ ನೀಡಿದರು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಗದಾಳ ಗ್ರಾಮದಸರ್ಕಾರಿ ಪ್ರೌಢ ಶಾಲೆ ಕಗದಾಳದಲ್ಲಿ ಹಮ್ಮಿಕೊಂಡ ಶಾಲಾ ಪ್ರಾರಂಭೋತ್ಸವದಲ್ಲಿ ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಮಾತನಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರವು ಉಚಿತ ಶಿಕ್ಷಣ ನೀಡುವುದರ ಜೊತೆಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಬಿಸಿಊಟ ಇತ್ಯಾದಿ ಸೌಲಭ್ಯಗಳನ್ನು ನೀಡುತ್ತಿದೆ.ಅರ್ಹ ಪ್ರತಿಭಾವಂತ ಶಿಕ್ಷಕರು ಸರಕಾರಿ ಶಾಲೆಯಲ್ಲಿ ಕೆಲಸ ನಿರ್ವಹಿಸುತಿದ್ದುದರಿಂದ , ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಿ ಪ್ರಯೋಜನ ಪಡೆಯಲು ಕೋರಿದರು. ಸರಸ್ವತಿ ಪೂಜೆ ಹಾಗೂ ಸಸಿಗೆ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ…
